ಬೆಂಗಳೂರು: ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಐಸಿಎಂಆರ್ನ ಸದ್ಯದ ವರದಿಯಂತೆ ಕೋವಿಡ್-19 ಸೋಂಕಿತರ ಸಂಖ್ಯೆ 279ಕ್ಕೆ ಏರಿದ್ದು, ನಾಲ್ವರು ಕೊರೊನಾ ವೈರಸ್ನಿಂದ ಮೃತಪಟ್ಟಿದ್ದಾರೆ.
ಇಂದು ಒಂದೇ ದಿನ ಕರ್ನಾಟಕದಲ್ಲಿ 3 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇದರಿಂದಾಗಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ.
ಶುಕ್ರವಾರ ಒಂದೇ ದಿನ ದೇಶದಲ್ಲಿ 49 ಕೊರೊನಾ ಪೊಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಮಹಾರಾಷ್ಟ್ರದಲ್ಲಿ 63, ಕೇರಳದಲ್ಲಿ 40, ಉತ್ತರ ಪ್ರದೇಶದಲ್ಲಿ 24, ರಾಜಸ್ಥಾನದಲ್ಲಿ 23, ತೆಲಂಗಾಣದಲ್ಲಿ 19, ದೆಹಲಿಯಲ್ಲಿ 17, ಕರ್ನಾಟಕದಲ್ಲಿ 16, ಲಡಾಕ್ನಲ್ಲಿ 13 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಗುಜರಾತ್ನಲ್ಲಿ 7, ಪಂಜಾಬ್ನಲ್ಲಿ 6, ಪಶ್ಚಿಮ ಬಂಗಾಳ, ಚಂಡೀಗಡದಲ್ಲಿ ತಲಾ 5 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕೊರೊನಾ ವೈರಸ್ನಿಂದ 23 ವ್ಯಕ್ತಿಗಳು ಗುಣಮುಖರಾಗಿದ್ದಾರೆ.
ವಿಶ್ವದಾದ್ಯಂತ 11,419 ಜನ ಕೋವಿಡ್-19ಗೆ ಬಲಿಯಾಗಿದ್ದು, 2 ಲಕ್ಷದ 76 ಸಾವಿರ ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದುವರೆಗೂ 91,954 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಭಾನುವಾರ ಜನತಾ ಕರ್ಫ್ಯೂಗೆ ಮೋದಿ ಕರೆ ನೀಡಿದ್ದಾರೆ. ಇದರಿಂದ ಭಾನುವಾರ ಭಾರತೀಯ ರೈಲ್ವೆ ಕೂಡ ಪ್ಯಾಸೆಂಜರ್ ರೈಲುಗಳನ್ನು ದೇಶಾದ್ಯಂತ ಸ್ಥಗಿತಗೊಳಿಸಿದ್ದು, ಬೆಂಗಳೂರಿನ ನಮ್ಮ ಮೆಟ್ರೋ ಸೇರಿ ದೇಶದ ಹಲವು ಮೆಟ್ರೋಗಳ ಸಂಚಾರವು ಬಂದ್ ಆಗಲಿದೆ. ಇದರ ಜೊತೆಗೆ ನಾಳೆಯಿಂದ ಅಂತರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿಷೇಧಿಸಿದ್ದು, ವೀಸಾಗಳನ್ನು ರದ್ದುಗೊಳಿಸಿದೆ.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…