ಬೆಂಗಳೂರು: ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಐಸಿಎಂಆರ್ನ ಸದ್ಯದ ವರದಿಯಂತೆ ಕೋವಿಡ್-19 ಸೋಂಕಿತರ ಸಂಖ್ಯೆ 279ಕ್ಕೆ ಏರಿದ್ದು, ನಾಲ್ವರು ಕೊರೊನಾ ವೈರಸ್ನಿಂದ ಮೃತಪಟ್ಟಿದ್ದಾರೆ.
ಇಂದು ಒಂದೇ ದಿನ ಕರ್ನಾಟಕದಲ್ಲಿ 3 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇದರಿಂದಾಗಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ.
ಶುಕ್ರವಾರ ಒಂದೇ ದಿನ ದೇಶದಲ್ಲಿ 49 ಕೊರೊನಾ ಪೊಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಮಹಾರಾಷ್ಟ್ರದಲ್ಲಿ 63, ಕೇರಳದಲ್ಲಿ 40, ಉತ್ತರ ಪ್ರದೇಶದಲ್ಲಿ 24, ರಾಜಸ್ಥಾನದಲ್ಲಿ 23, ತೆಲಂಗಾಣದಲ್ಲಿ 19, ದೆಹಲಿಯಲ್ಲಿ 17, ಕರ್ನಾಟಕದಲ್ಲಿ 16, ಲಡಾಕ್ನಲ್ಲಿ 13 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಗುಜರಾತ್ನಲ್ಲಿ 7, ಪಂಜಾಬ್ನಲ್ಲಿ 6, ಪಶ್ಚಿಮ ಬಂಗಾಳ, ಚಂಡೀಗಡದಲ್ಲಿ ತಲಾ 5 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕೊರೊನಾ ವೈರಸ್ನಿಂದ 23 ವ್ಯಕ್ತಿಗಳು ಗುಣಮುಖರಾಗಿದ್ದಾರೆ.
ವಿಶ್ವದಾದ್ಯಂತ 11,419 ಜನ ಕೋವಿಡ್-19ಗೆ ಬಲಿಯಾಗಿದ್ದು, 2 ಲಕ್ಷದ 76 ಸಾವಿರ ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದುವರೆಗೂ 91,954 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಭಾನುವಾರ ಜನತಾ ಕರ್ಫ್ಯೂಗೆ ಮೋದಿ ಕರೆ ನೀಡಿದ್ದಾರೆ. ಇದರಿಂದ ಭಾನುವಾರ ಭಾರತೀಯ ರೈಲ್ವೆ ಕೂಡ ಪ್ಯಾಸೆಂಜರ್ ರೈಲುಗಳನ್ನು ದೇಶಾದ್ಯಂತ ಸ್ಥಗಿತಗೊಳಿಸಿದ್ದು, ಬೆಂಗಳೂರಿನ ನಮ್ಮ ಮೆಟ್ರೋ ಸೇರಿ ದೇಶದ ಹಲವು ಮೆಟ್ರೋಗಳ ಸಂಚಾರವು ಬಂದ್ ಆಗಲಿದೆ. ಇದರ ಜೊತೆಗೆ ನಾಳೆಯಿಂದ ಅಂತರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿಷೇಧಿಸಿದ್ದು, ವೀಸಾಗಳನ್ನು ರದ್ದುಗೊಳಿಸಿದೆ.
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…
ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…
ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…
ಬಾಹ್ಯಕಾಶದಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…