Advertisement
ಸುದ್ದಿಗಳು

ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ

Share

ಬೆಂಗಳೂರು: ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಐಸಿಎಂಆರ್‌ನ ಸದ್ಯದ ವರದಿಯಂತೆ ಕೋವಿಡ್‌-19 ಸೋಂಕಿತರ ಸಂಖ್ಯೆ 279ಕ್ಕೆ ಏರಿದ್ದು, ನಾಲ್ವರು ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದಾರೆ.

ಇಂದು ಒಂದೇ ದಿನ ಕರ್ನಾಟಕದಲ್ಲಿ 3 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇದರಿಂದಾಗಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ.

ಶುಕ್ರವಾರ ಒಂದೇ ದಿನ ದೇಶದಲ್ಲಿ 49 ಕೊರೊನಾ ಪೊಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಮಹಾರಾಷ್ಟ್ರದಲ್ಲಿ 63, ಕೇರಳದಲ್ಲಿ 40, ಉತ್ತರ ಪ್ರದೇಶದಲ್ಲಿ 24, ರಾಜಸ್ಥಾನದಲ್ಲಿ 23, ತೆಲಂಗಾಣದಲ್ಲಿ 19, ದೆಹಲಿಯಲ್ಲಿ 17, ಕರ್ನಾಟಕದಲ್ಲಿ 16, ಲಡಾಕ್‌ನಲ್ಲಿ 13 ಪಾಸಿಟಿವ್‌ ಪ್ರಕರಣಗಳು ಕಂಡುಬಂದಿದ್ದು, ಗುಜರಾತ್‌ನಲ್ಲಿ 7, ಪಂಜಾಬ್‌ನಲ್ಲಿ 6, ಪಶ್ಚಿಮ ಬಂಗಾಳ, ಚಂಡೀಗಡದಲ್ಲಿ ತಲಾ 5 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕೊರೊನಾ ವೈರಸ್‌ನಿಂದ 23 ವ್ಯಕ್ತಿಗಳು ಗುಣಮುಖರಾಗಿದ್ದಾರೆ.

ವಿಶ್ವದಾದ್ಯಂತ 11,419 ಜನ ಕೋವಿಡ್‌-19ಗೆ ಬಲಿಯಾಗಿದ್ದು, 2 ಲಕ್ಷದ 76 ಸಾವಿರ ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದುವರೆಗೂ 91,954 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಭಾನುವಾರ ಜನತಾ ಕರ್ಫ್ಯೂಗೆ ಮೋದಿ ಕರೆ ನೀಡಿದ್ದಾರೆ. ಇದರಿಂದ ಭಾನುವಾರ ಭಾರತೀಯ ರೈಲ್ವೆ ಕೂಡ ಪ್ಯಾಸೆಂಜರ್‌ ರೈಲುಗಳನ್ನು ದೇಶಾದ್ಯಂತ ಸ್ಥಗಿತಗೊಳಿಸಿದ್ದು, ಬೆಂಗಳೂರಿನ ನಮ್ಮ ಮೆಟ್ರೋ ಸೇರಿ ದೇಶದ ಹಲವು ಮೆಟ್ರೋಗಳ ಸಂಚಾರವು ಬಂದ್‌ ಆಗಲಿದೆ. ಇದರ ಜೊತೆಗೆ ನಾಳೆಯಿಂದ ಅಂತರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿಷೇಧಿಸಿದ್ದು, ವೀಸಾಗಳನ್ನು ರದ್ದುಗೊಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

2 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

10 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

11 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

21 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago