Advertisement
ಸುದ್ದಿಗಳು

ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ

Share

ಬೆಂಗಳೂರು: ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಐಸಿಎಂಆರ್‌ನ ಸದ್ಯದ ವರದಿಯಂತೆ ಕೋವಿಡ್‌-19 ಸೋಂಕಿತರ ಸಂಖ್ಯೆ 279ಕ್ಕೆ ಏರಿದ್ದು, ನಾಲ್ವರು ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದಾರೆ.

ಇಂದು ಒಂದೇ ದಿನ ಕರ್ನಾಟಕದಲ್ಲಿ 3 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇದರಿಂದಾಗಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ.

ಶುಕ್ರವಾರ ಒಂದೇ ದಿನ ದೇಶದಲ್ಲಿ 49 ಕೊರೊನಾ ಪೊಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಮಹಾರಾಷ್ಟ್ರದಲ್ಲಿ 63, ಕೇರಳದಲ್ಲಿ 40, ಉತ್ತರ ಪ್ರದೇಶದಲ್ಲಿ 24, ರಾಜಸ್ಥಾನದಲ್ಲಿ 23, ತೆಲಂಗಾಣದಲ್ಲಿ 19, ದೆಹಲಿಯಲ್ಲಿ 17, ಕರ್ನಾಟಕದಲ್ಲಿ 16, ಲಡಾಕ್‌ನಲ್ಲಿ 13 ಪಾಸಿಟಿವ್‌ ಪ್ರಕರಣಗಳು ಕಂಡುಬಂದಿದ್ದು, ಗುಜರಾತ್‌ನಲ್ಲಿ 7, ಪಂಜಾಬ್‌ನಲ್ಲಿ 6, ಪಶ್ಚಿಮ ಬಂಗಾಳ, ಚಂಡೀಗಡದಲ್ಲಿ ತಲಾ 5 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕೊರೊನಾ ವೈರಸ್‌ನಿಂದ 23 ವ್ಯಕ್ತಿಗಳು ಗುಣಮುಖರಾಗಿದ್ದಾರೆ.

ವಿಶ್ವದಾದ್ಯಂತ 11,419 ಜನ ಕೋವಿಡ್‌-19ಗೆ ಬಲಿಯಾಗಿದ್ದು, 2 ಲಕ್ಷದ 76 ಸಾವಿರ ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದುವರೆಗೂ 91,954 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಭಾನುವಾರ ಜನತಾ ಕರ್ಫ್ಯೂಗೆ ಮೋದಿ ಕರೆ ನೀಡಿದ್ದಾರೆ. ಇದರಿಂದ ಭಾನುವಾರ ಭಾರತೀಯ ರೈಲ್ವೆ ಕೂಡ ಪ್ಯಾಸೆಂಜರ್‌ ರೈಲುಗಳನ್ನು ದೇಶಾದ್ಯಂತ ಸ್ಥಗಿತಗೊಳಿಸಿದ್ದು, ಬೆಂಗಳೂರಿನ ನಮ್ಮ ಮೆಟ್ರೋ ಸೇರಿ ದೇಶದ ಹಲವು ಮೆಟ್ರೋಗಳ ಸಂಚಾರವು ಬಂದ್‌ ಆಗಲಿದೆ. ಇದರ ಜೊತೆಗೆ ನಾಳೆಯಿಂದ ಅಂತರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿಷೇಧಿಸಿದ್ದು, ವೀಸಾಗಳನ್ನು ರದ್ದುಗೊಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

12 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

16 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

22 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

23 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago