Advertisement
Political mirror

ಕ್ಷೇತ್ರದ ಜನತೆಗೆ ಆದ ಅನ್ಯಾಯವನ್ನು ಸರಿಪಡಿಸುವ ಅಗತ್ಯವಿದೆ- ಜಿಲ್ಲಾ ನಾಯಕರಿಗೆ ಶಾಸಕ ಅಂಗಾರ ಸ್ಪಷ್ಟ ಸಂದೇಶ

Share

ಸುಳ್ಯ: ವೈಯುಕ್ತಿಕವಾಗಿ ತಾನು ಎಂದೂ ಸಚಿವ ಸ್ಥಾನ ಆಕಾಂಕ್ಷಿ ಅಲ್ಲ, ಅಧಿಕಾರದ ಹಿಂದೆಯೂ ಹೋಗಿಲ್ಲ. ಆದರೆ ಸಚಿವ ಸ್ಥಾನದ ಪಟ್ಟಿಯಲ್ಲಿ ಸೇರ್ಪಡೆ ಆಗಿದೆ ಎಂದು ಹೇಳಲಾಗಿ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಇಲ್ಲ ಎಂದಾಗ ಕ್ಷೇತ್ರದ ಜನತೆಗೆ, ಪಕ್ಷದ ಕಾರ್ಯಕರ್ತರಿಗೆ ಆದ ನೋವು, ಅನ್ಯಾಯವನ್ನು ಸರಿ ಪಡಿಸುವ ಅಗತ್ಯ ಇದೆ ಎಂಬ ಸ್ಪಷ್ಟ ಸಂದೇಶವನ್ನು ಶಾಸಕ ಅಂಗಾರ ತಮ್ಮನ್ನು ಭೇಟಿಯಾದ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಮತ್ತು ಮುಖಂಡರಿಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ನಿರಂತರವಾಗಿ ಆರು ಬಾರಿ ಪಕ್ಷವನ್ನು ಬೆಂಬಲಿಸಿ ತನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನತೆ, ದುಡಿದ ಕಾರ್ಯಕರ್ತರು ಸಹಜವಾಗಿ ಸಚಿವ ಸ್ಥಾನಕ್ಕೆ ಅಪೇಕ್ಷೆ ಪಟ್ಟಿದ್ದಾರೆ. ಸಿಗದಿದ್ದಾಗ ಅಸಮಾಧಾನ, ಆಕ್ರೋಶ ಹೊರ ಹಾಕುತ್ತಿದ್ದಾರೆ. ಅದಕ್ಕೆ ತುರ್ತು ಪರಿಹಾರ ಆಗಬೇಕಾಗಿದೆ ಎಂದು ಅಂಗಾರರು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

 

ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ಕ್ಯಾಪ್ಟನ್ ಗಣೇಶ್ ಕಾರ್ನಿಕ್ ಶನಿವಾರ ಸುಳ್ಯಕ್ಕೆ ಆಗಮಿಸಿ ದೊಡ್ಡತೋಟದ ಶಾಸಕ ಅಂಗಾರ ಅವರ ಮನೆಗೆ ತೆರಳಿ ಚರ್ಚೆ ನಡೆಸಿದ್ದಾರೆ.

ಸಚಿವ ಸ್ಥಾನ ದೊರಕಿಸಲು ಎಲ್ಲಾ ಪ್ರಯತ್ನವನ್ನೂ ನಡೆಸಲಾಗುವುದು ಎಂದು ಸಂಜೀವ ಮಠಂದೂರು ಅವರು ಶಾಸಕ ಅಂಗಾರರಿಗೆ ಮತ್ತು ಸುಳ್ಯದ ಬಿಜೆಪಿ ನಾಯಕರಿಗೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

22 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

2 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

2 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

3 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

3 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

4 days ago