Advertisement
Political mirror

ಕ್ಷೇತ್ರದ ಜನತೆಗೆ ಆದ ಅನ್ಯಾಯವನ್ನು ಸರಿಪಡಿಸುವ ಅಗತ್ಯವಿದೆ- ಜಿಲ್ಲಾ ನಾಯಕರಿಗೆ ಶಾಸಕ ಅಂಗಾರ ಸ್ಪಷ್ಟ ಸಂದೇಶ

Share

ಸುಳ್ಯ: ವೈಯುಕ್ತಿಕವಾಗಿ ತಾನು ಎಂದೂ ಸಚಿವ ಸ್ಥಾನ ಆಕಾಂಕ್ಷಿ ಅಲ್ಲ, ಅಧಿಕಾರದ ಹಿಂದೆಯೂ ಹೋಗಿಲ್ಲ. ಆದರೆ ಸಚಿವ ಸ್ಥಾನದ ಪಟ್ಟಿಯಲ್ಲಿ ಸೇರ್ಪಡೆ ಆಗಿದೆ ಎಂದು ಹೇಳಲಾಗಿ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಇಲ್ಲ ಎಂದಾಗ ಕ್ಷೇತ್ರದ ಜನತೆಗೆ, ಪಕ್ಷದ ಕಾರ್ಯಕರ್ತರಿಗೆ ಆದ ನೋವು, ಅನ್ಯಾಯವನ್ನು ಸರಿ ಪಡಿಸುವ ಅಗತ್ಯ ಇದೆ ಎಂಬ ಸ್ಪಷ್ಟ ಸಂದೇಶವನ್ನು ಶಾಸಕ ಅಂಗಾರ ತಮ್ಮನ್ನು ಭೇಟಿಯಾದ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಮತ್ತು ಮುಖಂಡರಿಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ನಿರಂತರವಾಗಿ ಆರು ಬಾರಿ ಪಕ್ಷವನ್ನು ಬೆಂಬಲಿಸಿ ತನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನತೆ, ದುಡಿದ ಕಾರ್ಯಕರ್ತರು ಸಹಜವಾಗಿ ಸಚಿವ ಸ್ಥಾನಕ್ಕೆ ಅಪೇಕ್ಷೆ ಪಟ್ಟಿದ್ದಾರೆ. ಸಿಗದಿದ್ದಾಗ ಅಸಮಾಧಾನ, ಆಕ್ರೋಶ ಹೊರ ಹಾಕುತ್ತಿದ್ದಾರೆ. ಅದಕ್ಕೆ ತುರ್ತು ಪರಿಹಾರ ಆಗಬೇಕಾಗಿದೆ ಎಂದು ಅಂಗಾರರು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

 

ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ಕ್ಯಾಪ್ಟನ್ ಗಣೇಶ್ ಕಾರ್ನಿಕ್ ಶನಿವಾರ ಸುಳ್ಯಕ್ಕೆ ಆಗಮಿಸಿ ದೊಡ್ಡತೋಟದ ಶಾಸಕ ಅಂಗಾರ ಅವರ ಮನೆಗೆ ತೆರಳಿ ಚರ್ಚೆ ನಡೆಸಿದ್ದಾರೆ.

ಸಚಿವ ಸ್ಥಾನ ದೊರಕಿಸಲು ಎಲ್ಲಾ ಪ್ರಯತ್ನವನ್ನೂ ನಡೆಸಲಾಗುವುದು ಎಂದು ಸಂಜೀವ ಮಠಂದೂರು ಅವರು ಶಾಸಕ ಅಂಗಾರರಿಗೆ ಮತ್ತು ಸುಳ್ಯದ ಬಿಜೆಪಿ ನಾಯಕರಿಗೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

14 minutes ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

5 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

13 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago