Advertisement
Political mirror

ಕ್ಷೇತ್ರದ ಜನತೆಗೆ ಆದ ಅನ್ಯಾಯವನ್ನು ಸರಿಪಡಿಸುವ ಅಗತ್ಯವಿದೆ- ಜಿಲ್ಲಾ ನಾಯಕರಿಗೆ ಶಾಸಕ ಅಂಗಾರ ಸ್ಪಷ್ಟ ಸಂದೇಶ

Share

ಸುಳ್ಯ: ವೈಯುಕ್ತಿಕವಾಗಿ ತಾನು ಎಂದೂ ಸಚಿವ ಸ್ಥಾನ ಆಕಾಂಕ್ಷಿ ಅಲ್ಲ, ಅಧಿಕಾರದ ಹಿಂದೆಯೂ ಹೋಗಿಲ್ಲ. ಆದರೆ ಸಚಿವ ಸ್ಥಾನದ ಪಟ್ಟಿಯಲ್ಲಿ ಸೇರ್ಪಡೆ ಆಗಿದೆ ಎಂದು ಹೇಳಲಾಗಿ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಇಲ್ಲ ಎಂದಾಗ ಕ್ಷೇತ್ರದ ಜನತೆಗೆ, ಪಕ್ಷದ ಕಾರ್ಯಕರ್ತರಿಗೆ ಆದ ನೋವು, ಅನ್ಯಾಯವನ್ನು ಸರಿ ಪಡಿಸುವ ಅಗತ್ಯ ಇದೆ ಎಂಬ ಸ್ಪಷ್ಟ ಸಂದೇಶವನ್ನು ಶಾಸಕ ಅಂಗಾರ ತಮ್ಮನ್ನು ಭೇಟಿಯಾದ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಮತ್ತು ಮುಖಂಡರಿಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ನಿರಂತರವಾಗಿ ಆರು ಬಾರಿ ಪಕ್ಷವನ್ನು ಬೆಂಬಲಿಸಿ ತನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನತೆ, ದುಡಿದ ಕಾರ್ಯಕರ್ತರು ಸಹಜವಾಗಿ ಸಚಿವ ಸ್ಥಾನಕ್ಕೆ ಅಪೇಕ್ಷೆ ಪಟ್ಟಿದ್ದಾರೆ. ಸಿಗದಿದ್ದಾಗ ಅಸಮಾಧಾನ, ಆಕ್ರೋಶ ಹೊರ ಹಾಕುತ್ತಿದ್ದಾರೆ. ಅದಕ್ಕೆ ತುರ್ತು ಪರಿಹಾರ ಆಗಬೇಕಾಗಿದೆ ಎಂದು ಅಂಗಾರರು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

 

ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ಕ್ಯಾಪ್ಟನ್ ಗಣೇಶ್ ಕಾರ್ನಿಕ್ ಶನಿವಾರ ಸುಳ್ಯಕ್ಕೆ ಆಗಮಿಸಿ ದೊಡ್ಡತೋಟದ ಶಾಸಕ ಅಂಗಾರ ಅವರ ಮನೆಗೆ ತೆರಳಿ ಚರ್ಚೆ ನಡೆಸಿದ್ದಾರೆ.

ಸಚಿವ ಸ್ಥಾನ ದೊರಕಿಸಲು ಎಲ್ಲಾ ಪ್ರಯತ್ನವನ್ನೂ ನಡೆಸಲಾಗುವುದು ಎಂದು ಸಂಜೀವ ಮಠಂದೂರು ಅವರು ಶಾಸಕ ಅಂಗಾರರಿಗೆ ಮತ್ತು ಸುಳ್ಯದ ಬಿಜೆಪಿ ನಾಯಕರಿಗೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

8 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

11 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

12 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

15 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

15 hours ago