Advertisement
ಮಾಹಿತಿ

ಕ್ಷೌರಿಕರು ಮತ್ತು ಅಗಸರಿಂದ ಪರಿಹಾರ ಧನಕ್ಕೆ  ಅರ್ಜಿ ಆಹ್ವಾನ – ಅವಧಿ ವಿಸ್ತರಣೆ

Share

ಮಂಗಳೂರು:- ಕೋವಿಡ್-19 ಹಿನ್ನಲೆಯಲ್ಲಿ 18 ರಿಂದ 65 ವರ್ಷದೊಳಗಿನ ಕ್ಷೌರಿಕ ಮತ್ತು ಅಗಸ ವೃತ್ತಿಯನ್ನು ನಿರ್ವಹಿಸುತ್ತಿರುವ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರವಾಗಿ ರೂ.5000 ಗಳನ್ನು ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

Advertisement
Advertisement

ಫಲಾನುಭವಿಗಳು ತಾವು ಕೆಲಸ ನಿರ್ವಹಿಸುತ್ತಿರುವ ವ್ಯಾಪ್ತಿಯ ಸೇವಾಸಿಂಧು ಕೇಂದ್ರದ ಸೇವಾಸಿಂಧು ಪೋರ್ಟಲ್ ನಲ್ಲಿ ನಿಗಧಿತ ಅರ್ಜಿಯಲ್ಲಿ ಮಾಹಿತಿ ಭರ್ತಿ ಮಾಡಿ, ಬ್ಯಾಂಕ್ ಖಾತೆಯೊಂದಿಗೆ ಜೋಡನೆಯಾಗಿರುವ ಆಧಾರ್ ಕಾರ್ಡ್, ವಿಳಾಸ ದೃಢೀಕರಣದ ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಮೊಬೈಲ್ ಸಂಖ್ಯೆ, ಸ್ವಯಂ ಘೋಷಣಾ ಪತ್ರ, ಉದ್ಯೋಗ ಪ್ರಮಾಣ ಪತ್ರ ಹಾಗೂ ತಮ್ಮ ಛಾಯಾ ಚಿತ್ರವನ್ನು ಅಪಲೋಡ್ ಮಾಡಬೇಕು.

Advertisement

ಕ್ಷೌರಿಕ, ಅಗಸ ವೃತ್ತಿಯನ್ನು ನಿರ್ವಹಿಸುತ್ತಿರುವ ಕುರಿತು ಉದ್ಯೋಗ ಪ್ರಮಾಣ ಪತ್ರ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು, ಹಾಗೂ ತಾಲ್ಲೂಕು ಮಟ್ಟದಲ್ಲಿ ತಹಸೀಲ್ದಾರರು, ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು, ಕಂದಾಯ ಅಧಿಕಾರಿಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ. ಕಾರ್ಮಿಕ ಇಲಾಖೆಯ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳು, ಸಹಾಯಕ ಕಾರ್ಮಿಕ ಆಯುಕ್ತರು, ಯಾವುದಾದರೊಂದು ಅಧಿಕಾರಿಯಿಂದ ದೃಢೀಕರಿಸಿ ಮೂಲ ಪ್ರತಿಯನ್ನು ಸ್ಕ್ಯಾನ್ ಮಾಡಿ ಅಪ್‍ಲೋಡ್ ಮಾಡಬೇಕಾಗಿರುತ್ತದೆ. ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನ ವೃತ್ತಿಯಲ್ಲಿ ತೊಡಗಿದ್ದಲ್ಲಿ ಒಬ್ಬರು ಮಾತ್ರ ಪರಿಹಾರ ಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಸೇವಾ ಸಿಂಧು ಪೋರ್ಟಲ್ ಮೂಲಕ  ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಜುಲೈ 10 ರವರೆಗೆ ವಿಸ್ತರಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿ, ದ.ಕ ಉಪವಿಭಾಗ-1, ಮಂಗಳೂರು, ಭಾರತ್‍ಬೀಡಿ ಎದುರು, ಬಂಟ್ಸ್‍ಹಾಸ್ಟೇಲ್, ಮಂಗಳೂರು-575003 ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

7 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

7 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

7 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

7 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

8 hours ago