ಮಂಗಳೂರು:- ಕೋವಿಡ್-19 ಹಿನ್ನಲೆಯಲ್ಲಿ 18 ರಿಂದ 65 ವರ್ಷದೊಳಗಿನ ಕ್ಷೌರಿಕ ಮತ್ತು ಅಗಸ ವೃತ್ತಿಯನ್ನು ನಿರ್ವಹಿಸುತ್ತಿರುವ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರವಾಗಿ ರೂ.5000 ಗಳನ್ನು ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ತಾವು ಕೆಲಸ ನಿರ್ವಹಿಸುತ್ತಿರುವ ವ್ಯಾಪ್ತಿಯ ಸೇವಾಸಿಂಧು ಕೇಂದ್ರದ ಸೇವಾಸಿಂಧು ಪೋರ್ಟಲ್ ನಲ್ಲಿ ನಿಗಧಿತ ಅರ್ಜಿಯಲ್ಲಿ ಮಾಹಿತಿ ಭರ್ತಿ ಮಾಡಿ, ಬ್ಯಾಂಕ್ ಖಾತೆಯೊಂದಿಗೆ ಜೋಡನೆಯಾಗಿರುವ ಆಧಾರ್ ಕಾರ್ಡ್, ವಿಳಾಸ ದೃಢೀಕರಣದ ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಮೊಬೈಲ್ ಸಂಖ್ಯೆ, ಸ್ವಯಂ ಘೋಷಣಾ ಪತ್ರ, ಉದ್ಯೋಗ ಪ್ರಮಾಣ ಪತ್ರ ಹಾಗೂ ತಮ್ಮ ಛಾಯಾ ಚಿತ್ರವನ್ನು ಅಪಲೋಡ್ ಮಾಡಬೇಕು.
ಕ್ಷೌರಿಕ, ಅಗಸ ವೃತ್ತಿಯನ್ನು ನಿರ್ವಹಿಸುತ್ತಿರುವ ಕುರಿತು ಉದ್ಯೋಗ ಪ್ರಮಾಣ ಪತ್ರ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು, ಹಾಗೂ ತಾಲ್ಲೂಕು ಮಟ್ಟದಲ್ಲಿ ತಹಸೀಲ್ದಾರರು, ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು, ಕಂದಾಯ ಅಧಿಕಾರಿಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ. ಕಾರ್ಮಿಕ ಇಲಾಖೆಯ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳು, ಸಹಾಯಕ ಕಾರ್ಮಿಕ ಆಯುಕ್ತರು, ಯಾವುದಾದರೊಂದು ಅಧಿಕಾರಿಯಿಂದ ದೃಢೀಕರಿಸಿ ಮೂಲ ಪ್ರತಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗಿರುತ್ತದೆ. ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನ ವೃತ್ತಿಯಲ್ಲಿ ತೊಡಗಿದ್ದಲ್ಲಿ ಒಬ್ಬರು ಮಾತ್ರ ಪರಿಹಾರ ಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಜುಲೈ 10 ರವರೆಗೆ ವಿಸ್ತರಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿ, ದ.ಕ ಉಪವಿಭಾಗ-1, ಮಂಗಳೂರು, ಭಾರತ್ಬೀಡಿ ಎದುರು, ಬಂಟ್ಸ್ಹಾಸ್ಟೇಲ್, ಮಂಗಳೂರು-575003 ಕಚೇರಿ ಪ್ರಕಟಣೆ ತಿಳಿಸಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…