Advertisement
ಮಾಹಿತಿ

ಕ್ಷೌರಿಕರು ಮತ್ತು ಅಗಸರಿಂದ ಪರಿಹಾರ ಧನಕ್ಕೆ  ಅರ್ಜಿ ಆಹ್ವಾನ – ಅವಧಿ ವಿಸ್ತರಣೆ

Share

ಮಂಗಳೂರು:- ಕೋವಿಡ್-19 ಹಿನ್ನಲೆಯಲ್ಲಿ 18 ರಿಂದ 65 ವರ್ಷದೊಳಗಿನ ಕ್ಷೌರಿಕ ಮತ್ತು ಅಗಸ ವೃತ್ತಿಯನ್ನು ನಿರ್ವಹಿಸುತ್ತಿರುವ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರವಾಗಿ ರೂ.5000 ಗಳನ್ನು ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಫಲಾನುಭವಿಗಳು ತಾವು ಕೆಲಸ ನಿರ್ವಹಿಸುತ್ತಿರುವ ವ್ಯಾಪ್ತಿಯ ಸೇವಾಸಿಂಧು ಕೇಂದ್ರದ ಸೇವಾಸಿಂಧು ಪೋರ್ಟಲ್ ನಲ್ಲಿ ನಿಗಧಿತ ಅರ್ಜಿಯಲ್ಲಿ ಮಾಹಿತಿ ಭರ್ತಿ ಮಾಡಿ, ಬ್ಯಾಂಕ್ ಖಾತೆಯೊಂದಿಗೆ ಜೋಡನೆಯಾಗಿರುವ ಆಧಾರ್ ಕಾರ್ಡ್, ವಿಳಾಸ ದೃಢೀಕರಣದ ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಮೊಬೈಲ್ ಸಂಖ್ಯೆ, ಸ್ವಯಂ ಘೋಷಣಾ ಪತ್ರ, ಉದ್ಯೋಗ ಪ್ರಮಾಣ ಪತ್ರ ಹಾಗೂ ತಮ್ಮ ಛಾಯಾ ಚಿತ್ರವನ್ನು ಅಪಲೋಡ್ ಮಾಡಬೇಕು.

ಕ್ಷೌರಿಕ, ಅಗಸ ವೃತ್ತಿಯನ್ನು ನಿರ್ವಹಿಸುತ್ತಿರುವ ಕುರಿತು ಉದ್ಯೋಗ ಪ್ರಮಾಣ ಪತ್ರ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು, ಹಾಗೂ ತಾಲ್ಲೂಕು ಮಟ್ಟದಲ್ಲಿ ತಹಸೀಲ್ದಾರರು, ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು, ಕಂದಾಯ ಅಧಿಕಾರಿಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ. ಕಾರ್ಮಿಕ ಇಲಾಖೆಯ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳು, ಸಹಾಯಕ ಕಾರ್ಮಿಕ ಆಯುಕ್ತರು, ಯಾವುದಾದರೊಂದು ಅಧಿಕಾರಿಯಿಂದ ದೃಢೀಕರಿಸಿ ಮೂಲ ಪ್ರತಿಯನ್ನು ಸ್ಕ್ಯಾನ್ ಮಾಡಿ ಅಪ್‍ಲೋಡ್ ಮಾಡಬೇಕಾಗಿರುತ್ತದೆ. ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನ ವೃತ್ತಿಯಲ್ಲಿ ತೊಡಗಿದ್ದಲ್ಲಿ ಒಬ್ಬರು ಮಾತ್ರ ಪರಿಹಾರ ಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಸೇವಾ ಸಿಂಧು ಪೋರ್ಟಲ್ ಮೂಲಕ  ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಜುಲೈ 10 ರವರೆಗೆ ವಿಸ್ತರಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿ, ದ.ಕ ಉಪವಿಭಾಗ-1, ಮಂಗಳೂರು, ಭಾರತ್‍ಬೀಡಿ ಎದುರು, ಬಂಟ್ಸ್‍ಹಾಸ್ಟೇಲ್, ಮಂಗಳೂರು-575003 ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

1 hour ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

10 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

10 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

11 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago