Advertisement
ಸುದ್ದಿಗಳು

ಖಗೋಳ ವೀಕ್ಷಕರಿಗೊಂದು ಅಪರೂಪದ ವಿದ್ಯಮಾನ | ಮೇ.13 ರಂದು ಬೆಳಗ್ಗೆ ಕಾಣಿಸಲಿದೆ ಸ್ವಾನ್ ಧೂಮಕೇತು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಗಸದಲ್ಲಿ ಬುಧವಾರ (ಮೇ13) ಬೆಳಗಿನ ಜಾವ ಅಚ್ಚರಿಯ ವಿದ್ಯಮಾನವೊಂದು ಘಟಿಸಲಿದೆ. ಭೂಮಿಯ ಸಮೀಪ ಅಂದರೆ 8.33 ಕೋಟಿ ಕಿ.ಮೀ.ದೂರದಲ್ಲಿ ಸ್ವಾನ್ ಧೂಮಕೇತು ಹಾದು ಹೋಗಲಿದೆ. ಇದು ಈ ಧೂಮಕೇತು 5.7 ರಷ್ಟು ಪ್ರಕಾಶಮಾನ (Magnitude) ಹೊಂದಿದೆ. ಕನಿಷ್ಟ 6.0 ರಷ್ಟು ಕಾಂತಿ ಹೊಂದಿರುವ ಯಾವುದೇ ಆಕಾಶಕಾಯ ಬರಿಗಣ್ಣಿಗೆ ಗೋಚರಿಸುತ್ತದೆ.

Advertisement
Advertisement
Advertisement
Advertisement

ಸಮಭಾಜಕ ವೃತ್ತದಿಂದ ದಕ್ಷಿಣ ಭಾಗದಲ್ಲಿ ವಾಸಿಸುವ ಮಂದಿ ಈ ಧೂಮಕೇತುವನ್ನು ಬರಿ ಕಣ್ಣಿನಿಂದ ವೀಕ್ಷಿಸಬಹುದಾಗಿದೆ.ನಾವು ಉತ್ತರ ಭಾಗದಲ್ಲಿರುವ ಕಾರಣ ಬರಿಗಣ್ಣಿಗೆ ಗೋಚರಿಸುವ ಸಾಧ್ಯತೆ ಕಡಿಮೆ. ಆದಾಗ್ಯೂ ದೂರದರ್ಶಕದ ಮೂಲಕ ವೀಕ್ಷಿಸಬಹುದಾಗಿದೆ. ಬೆಳಗ್ಗೆ ಸುಮಾರು 4.30 ರ ನಂತರ ಈಶಾನ್ಯ ಉತ್ತರ ಭಾಗದಲ್ಲಿ ಮೀನ ರಾಶಿಯಲ್ಲಿ ಕಾಣಿಸಿಕೊಳ್ಳಲಿದೆ.

Advertisement

ಮೇ.27 ಕ್ಕೆ ಈ ಧೂಮಕೇತು ಸೂರ್ಯನನ್ನು ಸಮೀಪಿಸಲಿದೆ. CometSWAN ಎಂಬ ಟ್ವಿಟರ್ ಖಾತೆಯಲ್ಲಿ ಈ ಧೂಮಕೇತುವಿನ ಚಲನೆಯನ್ನು ಅನುಸರಿಸಬಹುದು.

ಏನಿದು ಧೂಮಕೇತು:  ಅಸಂಖ್ಯಾತ ಕ್ಷುದ್ರ ಕಾಯಗಳು ಸೂರ್ಯನಿಗೆ ಪರಿಭ್ರಮಣೆ ಹಾಕುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ಹೆಚ್ಚಿನ ಧೂಳಿನ ಅಂಶ ಹೊಂದಿರುತ್ತವೆ.ಅವು ಸೂರ್ಯನ ಸಮೀಪ ಬರುತ್ತಿದ್ದಂತೆ ಸೂರ್ಯನ ವಿಪರೀತ ಶಾಖಕ್ಕೆ ಧೂಳಿನ ಹೊಗೆಯನ್ನು ಬಾಲದ ರೂಪದಲ್ಲಿ ಹೊರಸೂಸುತ್ತವೆ. ಅದುವೇ ಧೂಮಕೇತು.

Advertisement

76 ವರ್ಷಗಳಿಗೊಮ್ಮೆ ಸೂರ್ಯನ ಸಮೀಪ ಬರುವ ಹ್ಯಾಲಿ ಧೂಮಕೇತುವಿನಂತೆ ನಿಗದಿತ ಕಕ್ಷೆಯಲ್ಲಿ ಚಲಿಸುವ ಧೂಮಕೇತುಗಳೂ ಇವೆ.ಇನ್ನೂ ಒಂದು ಧೂಮಕೇತು ATLAS ಇದೇ ಮೇ 23 ರಂದು ಭೂಮಿಯ ಸಮೀಪ ಹಾದು ಹೋಗಲಿದೆ. ಇದು ಮೇ 31 ರಂದು ಸೂರ್ಯನ ಸಮೀಪ ದಾಟಿಹೋಗಲಿದೆ.ಇದು ಕೂಡಾ ಬರಿಗಣ್ಣಿಗೆ ಗೋಚರಿಸುವ ಸಾಧ್ಯತೆ ಕಡಿಮೆ.

ಮಾಹಿತಿ :

Advertisement

 

Advertisement

 

 

Advertisement

ಪಿ ಜಿ ಎಸ್ ಎನ್ ಪ್ರಸಾದ್ ಬಾಳಿಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…

1 hour ago

ಕುಂಭಸ್ನಾನ ಮತ್ತು ವಿಜ್ಞಾನ

ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…

2 hours ago

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

12 hours ago

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…

23 hours ago

ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…

23 hours ago

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ

ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…

23 hours ago