Advertisement
ಸುದ್ದಿಗಳು

ಖಗೋಳ ವೀಕ್ಷಕರಿಗೊಂದು ಅಪರೂಪದ ವಿದ್ಯಮಾನ | ಮೇ.13 ರಂದು ಬೆಳಗ್ಗೆ ಕಾಣಿಸಲಿದೆ ಸ್ವಾನ್ ಧೂಮಕೇತು |

Share

ಆಗಸದಲ್ಲಿ ಬುಧವಾರ (ಮೇ13) ಬೆಳಗಿನ ಜಾವ ಅಚ್ಚರಿಯ ವಿದ್ಯಮಾನವೊಂದು ಘಟಿಸಲಿದೆ. ಭೂಮಿಯ ಸಮೀಪ ಅಂದರೆ 8.33 ಕೋಟಿ ಕಿ.ಮೀ.ದೂರದಲ್ಲಿ ಸ್ವಾನ್ ಧೂಮಕೇತು ಹಾದು ಹೋಗಲಿದೆ. ಇದು ಈ ಧೂಮಕೇತು 5.7 ರಷ್ಟು ಪ್ರಕಾಶಮಾನ (Magnitude) ಹೊಂದಿದೆ. ಕನಿಷ್ಟ 6.0 ರಷ್ಟು ಕಾಂತಿ ಹೊಂದಿರುವ ಯಾವುದೇ ಆಕಾಶಕಾಯ ಬರಿಗಣ್ಣಿಗೆ ಗೋಚರಿಸುತ್ತದೆ.

ಸಮಭಾಜಕ ವೃತ್ತದಿಂದ ದಕ್ಷಿಣ ಭಾಗದಲ್ಲಿ ವಾಸಿಸುವ ಮಂದಿ ಈ ಧೂಮಕೇತುವನ್ನು ಬರಿ ಕಣ್ಣಿನಿಂದ ವೀಕ್ಷಿಸಬಹುದಾಗಿದೆ.ನಾವು ಉತ್ತರ ಭಾಗದಲ್ಲಿರುವ ಕಾರಣ ಬರಿಗಣ್ಣಿಗೆ ಗೋಚರಿಸುವ ಸಾಧ್ಯತೆ ಕಡಿಮೆ. ಆದಾಗ್ಯೂ ದೂರದರ್ಶಕದ ಮೂಲಕ ವೀಕ್ಷಿಸಬಹುದಾಗಿದೆ. ಬೆಳಗ್ಗೆ ಸುಮಾರು 4.30 ರ ನಂತರ ಈಶಾನ್ಯ ಉತ್ತರ ಭಾಗದಲ್ಲಿ ಮೀನ ರಾಶಿಯಲ್ಲಿ ಕಾಣಿಸಿಕೊಳ್ಳಲಿದೆ.

ಮೇ.27 ಕ್ಕೆ ಈ ಧೂಮಕೇತು ಸೂರ್ಯನನ್ನು ಸಮೀಪಿಸಲಿದೆ. CometSWAN ಎಂಬ ಟ್ವಿಟರ್ ಖಾತೆಯಲ್ಲಿ ಈ ಧೂಮಕೇತುವಿನ ಚಲನೆಯನ್ನು ಅನುಸರಿಸಬಹುದು.

ಏನಿದು ಧೂಮಕೇತು:  ಅಸಂಖ್ಯಾತ ಕ್ಷುದ್ರ ಕಾಯಗಳು ಸೂರ್ಯನಿಗೆ ಪರಿಭ್ರಮಣೆ ಹಾಕುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ಹೆಚ್ಚಿನ ಧೂಳಿನ ಅಂಶ ಹೊಂದಿರುತ್ತವೆ.ಅವು ಸೂರ್ಯನ ಸಮೀಪ ಬರುತ್ತಿದ್ದಂತೆ ಸೂರ್ಯನ ವಿಪರೀತ ಶಾಖಕ್ಕೆ ಧೂಳಿನ ಹೊಗೆಯನ್ನು ಬಾಲದ ರೂಪದಲ್ಲಿ ಹೊರಸೂಸುತ್ತವೆ. ಅದುವೇ ಧೂಮಕೇತು.

76 ವರ್ಷಗಳಿಗೊಮ್ಮೆ ಸೂರ್ಯನ ಸಮೀಪ ಬರುವ ಹ್ಯಾಲಿ ಧೂಮಕೇತುವಿನಂತೆ ನಿಗದಿತ ಕಕ್ಷೆಯಲ್ಲಿ ಚಲಿಸುವ ಧೂಮಕೇತುಗಳೂ ಇವೆ.ಇನ್ನೂ ಒಂದು ಧೂಮಕೇತು ATLAS ಇದೇ ಮೇ 23 ರಂದು ಭೂಮಿಯ ಸಮೀಪ ಹಾದು ಹೋಗಲಿದೆ. ಇದು ಮೇ 31 ರಂದು ಸೂರ್ಯನ ಸಮೀಪ ದಾಟಿಹೋಗಲಿದೆ.ಇದು ಕೂಡಾ ಬರಿಗಣ್ಣಿಗೆ ಗೋಚರಿಸುವ ಸಾಧ್ಯತೆ ಕಡಿಮೆ.

ಮಾಹಿತಿ :

 

 

 

ಪಿ ಜಿ ಎಸ್ ಎನ್ ಪ್ರಸಾದ್ ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago