ಬೆಳ್ಳಾರೆ: ಬೆಳ್ಳಾರೆ-ನಿಂತಿಕಲ್ಲು ಮುಖ್ಯ ರಸ್ತೆಯ ಪಂಜಿಗಾರಿನಲ್ಲಿ ಖಾಸಗಿ ಶಾಲಾ ಬಸ್ಸೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರೆ ಶಿಕ್ಷಕಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.
ಪೆರುವಾಜೆಯ ನಿವಾಸಿ ಶಿಕ್ಷಕಿ ಶೈನಿ ಎಂಬವರು ತನ್ನ ಡಿಯೊ ಸ್ಕೂಟಿಯಲ್ಲಿ ಪಂಜಿಗಾರು ಶಾಲೆಗೆ ತೆರಳುತ್ತಿದ್ದ ಸಂದರ್ಭ ಬೆಳ್ಳಾರೆಯ ಖಾಸಗಿ ಶಾಲೆಯ ಬಸ್ಸು ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆಯಿತು. ಪರಿಣಾಮ ಶಿಕ್ಷಕಿ ಶೈನಿಯವರು ರಸ್ತೆಗೆ ಬಿದ್ದು ಗಾಯಗೊಂಡರು. ಕೂಡಲೆ ಇವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಶಿಕ್ಷಕಿಗೆ ತಲೆಯ ಭಾಗಕ್ಕೆ ಹಾಗು ಕೈಗಳಿಗೆ ಗಾಯಗಳಾಗಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…