ಬೆಳ್ಳಾರೆ: ಬೆಳ್ಳಾರೆ-ನಿಂತಿಕಲ್ಲು ಮುಖ್ಯ ರಸ್ತೆಯ ಪಂಜಿಗಾರಿನಲ್ಲಿ ಖಾಸಗಿ ಶಾಲಾ ಬಸ್ಸೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರೆ ಶಿಕ್ಷಕಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.
ಪೆರುವಾಜೆಯ ನಿವಾಸಿ ಶಿಕ್ಷಕಿ ಶೈನಿ ಎಂಬವರು ತನ್ನ ಡಿಯೊ ಸ್ಕೂಟಿಯಲ್ಲಿ ಪಂಜಿಗಾರು ಶಾಲೆಗೆ ತೆರಳುತ್ತಿದ್ದ ಸಂದರ್ಭ ಬೆಳ್ಳಾರೆಯ ಖಾಸಗಿ ಶಾಲೆಯ ಬಸ್ಸು ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆಯಿತು. ಪರಿಣಾಮ ಶಿಕ್ಷಕಿ ಶೈನಿಯವರು ರಸ್ತೆಗೆ ಬಿದ್ದು ಗಾಯಗೊಂಡರು. ಕೂಡಲೆ ಇವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಶಿಕ್ಷಕಿಗೆ ತಲೆಯ ಭಾಗಕ್ಕೆ ಹಾಗು ಕೈಗಳಿಗೆ ಗಾಯಗಳಾಗಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…