ಬೆಳ್ಳಾರೆ: ಬೆಳ್ಳಾರೆ-ನಿಂತಿಕಲ್ಲು ಮುಖ್ಯ ರಸ್ತೆಯ ಪಂಜಿಗಾರಿನಲ್ಲಿ ಖಾಸಗಿ ಶಾಲಾ ಬಸ್ಸೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರೆ ಶಿಕ್ಷಕಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.
ಪೆರುವಾಜೆಯ ನಿವಾಸಿ ಶಿಕ್ಷಕಿ ಶೈನಿ ಎಂಬವರು ತನ್ನ ಡಿಯೊ ಸ್ಕೂಟಿಯಲ್ಲಿ ಪಂಜಿಗಾರು ಶಾಲೆಗೆ ತೆರಳುತ್ತಿದ್ದ ಸಂದರ್ಭ ಬೆಳ್ಳಾರೆಯ ಖಾಸಗಿ ಶಾಲೆಯ ಬಸ್ಸು ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆಯಿತು. ಪರಿಣಾಮ ಶಿಕ್ಷಕಿ ಶೈನಿಯವರು ರಸ್ತೆಗೆ ಬಿದ್ದು ಗಾಯಗೊಂಡರು. ಕೂಡಲೆ ಇವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಶಿಕ್ಷಕಿಗೆ ತಲೆಯ ಭಾಗಕ್ಕೆ ಹಾಗು ಕೈಗಳಿಗೆ ಗಾಯಗಳಾಗಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…