ಖಾಸಗೀ ಆಸ್ಪತ್ರೆಗಳಿಂದ ನಡೆಯುತ್ತಿದೆ ಕೊರೋನಾ ದಂಧೆ | ಮೌನಕ್ಕೆ ಜಾರಿದ ಜನಪ್ರತಿನಿಧಿಗಳು – ಆರೋಪ |

July 11, 2020
11:22 AM
ಮಂಗಳೂರು: ಕೊರೋನಾ ವೈರಸ್ ತೀವ್ರವಾಗಿ ಹರಡುತ್ತಿದ್ದು, ಜನತೆ ಭಯಭೀತಿಗೊಳಗಾಗಿದ್ದರೆ, ಈ ನಡುವೆ ಖಾಸಗೀ ಆಸ್ಪತ್ರೆಗಳು ಕೊರೋನಾ ಹೆಸರಿನಲ್ಲಿ ಜನತೆಯನ್ನು ವಿಪರೀತವಾಗಿ ಸುಲಿಗೆ ಮಾಡುವ ಮೂಲಕ ಹಗಲು ದರೋಡೆ ನಡೆಸುತ್ತಿದೆ. ಲಾಕ್ಡೌನ್ ನಿಂದಾಗಿ ಜನರ ಬದುಕು ತೀರಾ ತತ್ತರಿಸಿದ್ದು, ಉದ್ಯೋಗವಿಲ್ಲದೆ,ಕಾಸಿಲ್ಲದೆ, ಆಹಾರವಿಲ್ಲದೆ ಕಂಗಾಲಾಗಿರುವ ಈ ಸಂದರ್ಭದಲ್ಲಿ ಕೊರೋನಾ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದರೂ ಸರಕಾರಗಳು ಹಾಗೂ ಜನಪ್ರತಿನಿಧಿಗಳು ದಿನ್ಯಮೌನ ವಹಿಸುವ ಮೂಲಕ ಪರೋಕ್ಷವಾಗಿ ಸಹಕರಿಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು
ಸಿಪಿಐಎಂ  ದ.ಕ.ಜಿಲ್ಲಾ ನಾಯಕರಾದ ಜಯಂತಿ ಬಿ.ಶೆಟ್ಟಿ ಹೇಳಿದರು.
ಅವರು ಕೊರೋನಾ ನಿಗ್ರಹಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿಫಲತೆಯ ವಿರುದ್ದ ಸಿಪಿಐಎಂ ಹಮ್ಮಿಕೊಂಡ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಪಕ್ಕಲಡ್ಕದಲ್ಲಿ ಜರುಗಿದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.  ಪ್ರತಿಭಟನೆಯಲ್ಲಿ ಭಾಗವಹಿಸಿದ ಸಿಐಟಿಯು ಜಿಲ್ಲಾ ಮುಖಂಡರಾದ ಜಯಲಕ್ಷ್ಮಿಯವರು ಮಾತನಾಡುತ್ತಾ, ಲಾಕ್ಡೌನ್ ನಿಂದಾಗಿ ವಿವಿಧ ವಿಭಾಗದ ಕಾರ್ಮಿಕರು ತೀರಾ ಸಂಕಷ್ಟದಲ್ಲಿದ್ದು, ಇಲ್ಲಿಯವರೆಗೂ ಯಾವುದೇ ಪರಿಹಾರವನ್ನು ಘೋಷಿಸಿಲ್ಲ. ಬದಲಾಗಿ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಯುದ್ಧದ ಉನ್ಮಾದವನ್ನು ಸ್ರಷ್ಠಿಸಲಾಗಿದೆ. ದೇಶದ ಆರ್ಥಿಕತೆಯ ಜೊತೆಗೆ ಜನರ ಬದುಕನ್ನು ಸರ್ವನಾಶ ಮಾಡಲು ಕೇಂದ್ರದ ನರೇಂದ್ರ ಮೋದಿ ಸರಕಾರ ಹವಣಿಸುತ್ತಿದೆ ಎಂದು ಹೇಳಿದರು.
 ಈ ಸಂಧರ್ಭದಲ್ಲಿ ಸಿಪಿಐಎಂ ಜಿಲ್ಲಾ ನಾಯಕರಾದ ಜೆ.ಬಾಲಕೃಷ್ಣ ಶೆಟ್ಟಿ, ಇತರ ಸ್ಥಳೀಯ ಕಾರ್ಮಿಕ ನಾಯಕರಾದ ಲೀಲಾ ಜೆ, ರೋಹಿಣಿ, ಗೀತಾ, ಭಾರತಿ, ವಿಮಲ ಮುಂತಾದವರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌
August 13, 2025
11:03 PM
by: ದ ರೂರಲ್ ಮಿರರ್.ಕಾಂ
ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ
August 13, 2025
9:13 PM
by: The Rural Mirror ಸುದ್ದಿಜಾಲ
15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ 
August 13, 2025
8:04 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?
August 13, 2025
2:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group