ಸುದ್ದಿಗಳು

ಖಾಸಗೀ ಆಸ್ಪತ್ರೆಗಳಿಂದ ನಡೆಯುತ್ತಿದೆ ಕೊರೋನಾ ದಂಧೆ | ಮೌನಕ್ಕೆ ಜಾರಿದ ಜನಪ್ರತಿನಿಧಿಗಳು – ಆರೋಪ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಮಂಗಳೂರು: ಕೊರೋನಾ ವೈರಸ್ ತೀವ್ರವಾಗಿ ಹರಡುತ್ತಿದ್ದು, ಜನತೆ ಭಯಭೀತಿಗೊಳಗಾಗಿದ್ದರೆ, ಈ ನಡುವೆ ಖಾಸಗೀ ಆಸ್ಪತ್ರೆಗಳು ಕೊರೋನಾ ಹೆಸರಿನಲ್ಲಿ ಜನತೆಯನ್ನು ವಿಪರೀತವಾಗಿ ಸುಲಿಗೆ ಮಾಡುವ ಮೂಲಕ ಹಗಲು ದರೋಡೆ ನಡೆಸುತ್ತಿದೆ. ಲಾಕ್ಡೌನ್ ನಿಂದಾಗಿ ಜನರ ಬದುಕು ತೀರಾ ತತ್ತರಿಸಿದ್ದು, ಉದ್ಯೋಗವಿಲ್ಲದೆ,ಕಾಸಿಲ್ಲದೆ, ಆಹಾರವಿಲ್ಲದೆ ಕಂಗಾಲಾಗಿರುವ ಈ ಸಂದರ್ಭದಲ್ಲಿ ಕೊರೋನಾ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದರೂ ಸರಕಾರಗಳು ಹಾಗೂ ಜನಪ್ರತಿನಿಧಿಗಳು ದಿನ್ಯಮೌನ ವಹಿಸುವ ಮೂಲಕ ಪರೋಕ್ಷವಾಗಿ ಸಹಕರಿಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು
ಸಿಪಿಐಎಂ  ದ.ಕ.ಜಿಲ್ಲಾ ನಾಯಕರಾದ ಜಯಂತಿ ಬಿ.ಶೆಟ್ಟಿ ಹೇಳಿದರು.
ಅವರು ಕೊರೋನಾ ನಿಗ್ರಹಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿಫಲತೆಯ ವಿರುದ್ದ ಸಿಪಿಐಎಂ ಹಮ್ಮಿಕೊಂಡ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಪಕ್ಕಲಡ್ಕದಲ್ಲಿ ಜರುಗಿದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.  ಪ್ರತಿಭಟನೆಯಲ್ಲಿ ಭಾಗವಹಿಸಿದ ಸಿಐಟಿಯು ಜಿಲ್ಲಾ ಮುಖಂಡರಾದ ಜಯಲಕ್ಷ್ಮಿಯವರು ಮಾತನಾಡುತ್ತಾ, ಲಾಕ್ಡೌನ್ ನಿಂದಾಗಿ ವಿವಿಧ ವಿಭಾಗದ ಕಾರ್ಮಿಕರು ತೀರಾ ಸಂಕಷ್ಟದಲ್ಲಿದ್ದು, ಇಲ್ಲಿಯವರೆಗೂ ಯಾವುದೇ ಪರಿಹಾರವನ್ನು ಘೋಷಿಸಿಲ್ಲ. ಬದಲಾಗಿ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಯುದ್ಧದ ಉನ್ಮಾದವನ್ನು ಸ್ರಷ್ಠಿಸಲಾಗಿದೆ. ದೇಶದ ಆರ್ಥಿಕತೆಯ ಜೊತೆಗೆ ಜನರ ಬದುಕನ್ನು ಸರ್ವನಾಶ ಮಾಡಲು ಕೇಂದ್ರದ ನರೇಂದ್ರ ಮೋದಿ ಸರಕಾರ ಹವಣಿಸುತ್ತಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಸಿಪಿಐಎಂ ಜಿಲ್ಲಾ ನಾಯಕರಾದ ಜೆ.ಬಾಲಕೃಷ್ಣ ಶೆಟ್ಟಿ, ಇತರ ಸ್ಥಳೀಯ ಕಾರ್ಮಿಕ ನಾಯಕರಾದ ಲೀಲಾ ಜೆ, ರೋಹಿಣಿ, ಗೀತಾ, ಭಾರತಿ, ವಿಮಲ ಮುಂತಾದವರು ಉಪಸ್ಥಿತರಿದ್ದರು.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

29 minutes ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

15 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

2 days ago