Advertisement
ಸುದ್ದಿಗಳು

ಖಾಸಗೀ ಆಸ್ಪತ್ರೆಗಳಿಂದ ನಡೆಯುತ್ತಿದೆ ಕೊರೋನಾ ದಂಧೆ | ಮೌನಕ್ಕೆ ಜಾರಿದ ಜನಪ್ರತಿನಿಧಿಗಳು – ಆರೋಪ |

Share
ಮಂಗಳೂರು: ಕೊರೋನಾ ವೈರಸ್ ತೀವ್ರವಾಗಿ ಹರಡುತ್ತಿದ್ದು, ಜನತೆ ಭಯಭೀತಿಗೊಳಗಾಗಿದ್ದರೆ, ಈ ನಡುವೆ ಖಾಸಗೀ ಆಸ್ಪತ್ರೆಗಳು ಕೊರೋನಾ ಹೆಸರಿನಲ್ಲಿ ಜನತೆಯನ್ನು ವಿಪರೀತವಾಗಿ ಸುಲಿಗೆ ಮಾಡುವ ಮೂಲಕ ಹಗಲು ದರೋಡೆ ನಡೆಸುತ್ತಿದೆ. ಲಾಕ್ಡೌನ್ ನಿಂದಾಗಿ ಜನರ ಬದುಕು ತೀರಾ ತತ್ತರಿಸಿದ್ದು, ಉದ್ಯೋಗವಿಲ್ಲದೆ,ಕಾಸಿಲ್ಲದೆ, ಆಹಾರವಿಲ್ಲದೆ ಕಂಗಾಲಾಗಿರುವ ಈ ಸಂದರ್ಭದಲ್ಲಿ ಕೊರೋನಾ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದರೂ ಸರಕಾರಗಳು ಹಾಗೂ ಜನಪ್ರತಿನಿಧಿಗಳು ದಿನ್ಯಮೌನ ವಹಿಸುವ ಮೂಲಕ ಪರೋಕ್ಷವಾಗಿ ಸಹಕರಿಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು
ಸಿಪಿಐಎಂ  ದ.ಕ.ಜಿಲ್ಲಾ ನಾಯಕರಾದ ಜಯಂತಿ ಬಿ.ಶೆಟ್ಟಿ ಹೇಳಿದರು.
ಅವರು ಕೊರೋನಾ ನಿಗ್ರಹಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿಫಲತೆಯ ವಿರುದ್ದ ಸಿಪಿಐಎಂ ಹಮ್ಮಿಕೊಂಡ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಪಕ್ಕಲಡ್ಕದಲ್ಲಿ ಜರುಗಿದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.  ಪ್ರತಿಭಟನೆಯಲ್ಲಿ ಭಾಗವಹಿಸಿದ ಸಿಐಟಿಯು ಜಿಲ್ಲಾ ಮುಖಂಡರಾದ ಜಯಲಕ್ಷ್ಮಿಯವರು ಮಾತನಾಡುತ್ತಾ, ಲಾಕ್ಡೌನ್ ನಿಂದಾಗಿ ವಿವಿಧ ವಿಭಾಗದ ಕಾರ್ಮಿಕರು ತೀರಾ ಸಂಕಷ್ಟದಲ್ಲಿದ್ದು, ಇಲ್ಲಿಯವರೆಗೂ ಯಾವುದೇ ಪರಿಹಾರವನ್ನು ಘೋಷಿಸಿಲ್ಲ. ಬದಲಾಗಿ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಯುದ್ಧದ ಉನ್ಮಾದವನ್ನು ಸ್ರಷ್ಠಿಸಲಾಗಿದೆ. ದೇಶದ ಆರ್ಥಿಕತೆಯ ಜೊತೆಗೆ ಜನರ ಬದುಕನ್ನು ಸರ್ವನಾಶ ಮಾಡಲು ಕೇಂದ್ರದ ನರೇಂದ್ರ ಮೋದಿ ಸರಕಾರ ಹವಣಿಸುತ್ತಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಸಿಪಿಐಎಂ ಜಿಲ್ಲಾ ನಾಯಕರಾದ ಜೆ.ಬಾಲಕೃಷ್ಣ ಶೆಟ್ಟಿ, ಇತರ ಸ್ಥಳೀಯ ಕಾರ್ಮಿಕ ನಾಯಕರಾದ ಲೀಲಾ ಜೆ, ರೋಹಿಣಿ, ಗೀತಾ, ಭಾರತಿ, ವಿಮಲ ಮುಂತಾದವರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

3 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

3 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

20 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago