Advertisement
ಸುದ್ದಿಗಳು

ಖಾಸಗೀ ಆಸ್ಪತ್ರೆಗಳಿಂದ ನಡೆಯುತ್ತಿದೆ ಕೊರೋನಾ ದಂಧೆ | ಮೌನಕ್ಕೆ ಜಾರಿದ ಜನಪ್ರತಿನಿಧಿಗಳು – ಆರೋಪ |

Share
ಮಂಗಳೂರು: ಕೊರೋನಾ ವೈರಸ್ ತೀವ್ರವಾಗಿ ಹರಡುತ್ತಿದ್ದು, ಜನತೆ ಭಯಭೀತಿಗೊಳಗಾಗಿದ್ದರೆ, ಈ ನಡುವೆ ಖಾಸಗೀ ಆಸ್ಪತ್ರೆಗಳು ಕೊರೋನಾ ಹೆಸರಿನಲ್ಲಿ ಜನತೆಯನ್ನು ವಿಪರೀತವಾಗಿ ಸುಲಿಗೆ ಮಾಡುವ ಮೂಲಕ ಹಗಲು ದರೋಡೆ ನಡೆಸುತ್ತಿದೆ. ಲಾಕ್ಡೌನ್ ನಿಂದಾಗಿ ಜನರ ಬದುಕು ತೀರಾ ತತ್ತರಿಸಿದ್ದು, ಉದ್ಯೋಗವಿಲ್ಲದೆ,ಕಾಸಿಲ್ಲದೆ, ಆಹಾರವಿಲ್ಲದೆ ಕಂಗಾಲಾಗಿರುವ ಈ ಸಂದರ್ಭದಲ್ಲಿ ಕೊರೋನಾ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದರೂ ಸರಕಾರಗಳು ಹಾಗೂ ಜನಪ್ರತಿನಿಧಿಗಳು ದಿನ್ಯಮೌನ ವಹಿಸುವ ಮೂಲಕ ಪರೋಕ್ಷವಾಗಿ ಸಹಕರಿಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು
ಸಿಪಿಐಎಂ  ದ.ಕ.ಜಿಲ್ಲಾ ನಾಯಕರಾದ ಜಯಂತಿ ಬಿ.ಶೆಟ್ಟಿ ಹೇಳಿದರು.
ಅವರು ಕೊರೋನಾ ನಿಗ್ರಹಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿಫಲತೆಯ ವಿರುದ್ದ ಸಿಪಿಐಎಂ ಹಮ್ಮಿಕೊಂಡ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಪಕ್ಕಲಡ್ಕದಲ್ಲಿ ಜರುಗಿದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.  ಪ್ರತಿಭಟನೆಯಲ್ಲಿ ಭಾಗವಹಿಸಿದ ಸಿಐಟಿಯು ಜಿಲ್ಲಾ ಮುಖಂಡರಾದ ಜಯಲಕ್ಷ್ಮಿಯವರು ಮಾತನಾಡುತ್ತಾ, ಲಾಕ್ಡೌನ್ ನಿಂದಾಗಿ ವಿವಿಧ ವಿಭಾಗದ ಕಾರ್ಮಿಕರು ತೀರಾ ಸಂಕಷ್ಟದಲ್ಲಿದ್ದು, ಇಲ್ಲಿಯವರೆಗೂ ಯಾವುದೇ ಪರಿಹಾರವನ್ನು ಘೋಷಿಸಿಲ್ಲ. ಬದಲಾಗಿ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಯುದ್ಧದ ಉನ್ಮಾದವನ್ನು ಸ್ರಷ್ಠಿಸಲಾಗಿದೆ. ದೇಶದ ಆರ್ಥಿಕತೆಯ ಜೊತೆಗೆ ಜನರ ಬದುಕನ್ನು ಸರ್ವನಾಶ ಮಾಡಲು ಕೇಂದ್ರದ ನರೇಂದ್ರ ಮೋದಿ ಸರಕಾರ ಹವಣಿಸುತ್ತಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಸಿಪಿಐಎಂ ಜಿಲ್ಲಾ ನಾಯಕರಾದ ಜೆ.ಬಾಲಕೃಷ್ಣ ಶೆಟ್ಟಿ, ಇತರ ಸ್ಥಳೀಯ ಕಾರ್ಮಿಕ ನಾಯಕರಾದ ಲೀಲಾ ಜೆ, ರೋಹಿಣಿ, ಗೀತಾ, ಭಾರತಿ, ವಿಮಲ ಮುಂತಾದವರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತಿರಸ್ಕೃತ ಮಾವು, ತೆಂಗಿನಿಂದಲೂ ಕೋಟಿ ಮೌಲ್ಯದ ಉದ್ಯಮ – ‘ಜೀರೋ ವೇಸ್ಟ್’ ಮಾದರಿ ರೈತರಿಗೆ ಹೊಸ ಆಶಾಕಿರಣ

ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…

2 minutes ago

ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ.…

8 hours ago

ಮುಂಗಾರು ದುರ್ಬಲ – ದೇಶದಲ್ಲಿ 40% ಮಳೆ ಕೊರತೆ, ಕರಾವಳಿ ಕರ್ನಾಟಕಕ್ಕೆ ಜೂನ್ 25ರ ಬಳಿಕ ಮಳೆ ನಿರೀಕ್ಷೆ

ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…

9 hours ago

ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ

ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…

10 hours ago

PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ

PM-KISAN ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ರೈತರ ಖಾತೆಗಳಿಗೆ ಜಮೆ…

10 hours ago