Advertisement
MIRROR FOCUS

ಗಡಿಯಲ್ಲಿ ಗಜಪಡೆಗಳ ಮ್ಯಾರಥಾನ್….!

Share

ಸುಳ್ಯ: ಆನೆಗಳ ಮ್ಯಾರಥಾನ್…!. ಹೌದು ಇದು ಆನೆಗಳದ್ದೇ ಮ್ಯಾರಥಾನ್.  ಇದು ಆ ಕಡೆಯಿಂದ ಈ ಕಡೆಗೆ, ಈ ಕಡೆಯಿಂದ ಆ ಕಡೆಗೆ ನಡೆಯುವ ಮ್ಯಾರಥಾನ್..!

ಒಮ್ಮೆ ಆ ಹಿಂಡು ಹಿಂಡಾಗಿ ಕೇರಳದತ್ತ… ಕೆಲವು ದಿನಗಳ ಬಳಿಕ ಅಲ್ಲಿಂದ ಮರಳಿ ಕರ್ನಾಟಕದತ್ತ. ಹೀಗೆ ಕೇರಳ ಮತ್ತು ಕರ್ನಾಟಕದ ಗಡಿ ಭಾಗದಲ್ಲಿ ಗಜಪಡೆಗಳ ಮ್ಯಾರಥಾನ್ ಸುಳ್ಯದ ಗಡಿ ಗ್ರಾಮಗಳಲ್ಲಿ ಮಾತ್ರ ಕಂಡು ಬರುವ ವಿಶೇಷತೆ. ಮಂಡೆಕೋಲು ಗಡಿಯಿಂದ ಆರಂಭಗೊಂಡು ದೇಲಂಪಾಡಿ, ಅಡೂರು, ಪಾಂಡಿ, ಮುಳ್ಳೇರಿಯ, ಕಾರಡುಕ್ಕ ವರೆಗೂ ಮುಂದುವರಿಯುವ ಮ್ಯಾರಥಾನ್ ಓಟ ಈಕಡೆ ಗಡಿ ದಾಟಿ ಮಂಡೆಕೋಲು.. ಅಜ್ಜಾವರ, ಆಲೆಟ್ಟಿ ವರೆಗೆ ಕೆಲವೊಮ್ಮೆ ಸುಳ್ಯ ನಗರದವರೆಗೂ ಮುಂದುವರಿಯುತ್ತದೆ. ಸಲಗಗಳು ಗಡಿ ಗ್ರಾಮಗಳನ್ನು ರಹದಾರಿಯಾಗಿಸಿ ತಮ್ಮ ಓಟವನ್ನು ಮುಂದುವರಿಸುತ್ತಿದ್ದರೆ ಗಜ ಹೆಜ್ಜೆಗೆ ಸಿಲುಕಿ ಗಡಿ ಗ್ರಾಮಗಳು ನಲುಗಿ ಹೋಗಿದೆ.

ಹೌದು, ಸುಳ್ಯ ತಾಲೂಕಿನ ಗಡಿ ಗ್ರಾಮವಾದ ಮಂಡೆಕೋಲಿನಲ್ಲಿ ಭೀತಿ ಹುಟ್ಟಿಸಿ ಕಾಡಾನೆಗಳ ಓಡಾಟ ಮತ್ತೆ ಅಧಿಕವಾಗಿದೆ. ಕಳೆದ ಐದು ವರ್ಷಗಳಿಗಿಂತಲೂ ಅಧಿಕ ಸಮಯದಿಂದ ಕಾಡಾನೆ ಹಾವಳಿಯಿಂದ ನಲುಗಿರುವ ಮಂಡೆಕೋಲಿನ ವಿವಿಧ ಭಾಗಗಳಲ್ಲಿ ಮತ್ತೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿ ಭೀತಿ ಹುಟ್ಟಿಸುತ್ತಿದ್ದು ಕಳೆದ ಒಂದು ವಾರದಿಂದ ಗಜಪಡೆಗಳ ಉಪಟಳ ಅಧಿಕವಾಗಿದೆ. ಪರಪ್ಪೆ ಅರಣ್ಯ ಭಾಗದಿಂದ ಬಂದ ಆನೆಗಳು ಕಳೆದ ಕೆಲವು ದಿನಗಳಿಂದ ಮಂಡೆಕೋಲು ಗ್ರಾಮದ ವಿವಿಧ ಭಾಗಗಳಲ್ಲಿ ಓಡಾಡಿ ಗ್ರಾಮದಲ್ಲಿ ಭೀತಿಯ ವಾತಾವರಣ ಉಂಟು ಮಾಡಿದೆ. ಮಂಡೆಕೋಲು ಗ್ರಾಮದ ಕನ್ಯಾನ, ಕಲ್ಲಡ್ಕ, ಪೆರಾಜೆ ಅಕ್ಕಪ್ಪಾಡಿ ಭಾಗಕ್ಕೆ ದಾಂಗುಡಿಯಿಟ್ಟ ಆನೆಗಳ ಹಿಂಡು ಕೆಲವು ಕಡೆಗಳಲ್ಲಿ ಕೃಷಿ ತೋಟದತ್ತ ನುಗ್ಗಿ ಕೃಷಿ ನಾಶಪಡಿಸಿದರೆ ಕಲ್ಲಡ್ಕದ ಶಾಲಾ ಗ್ರೌಂಡ್‍ನಲ್ಲೇ ಒಂದು ರಾತ್ರಿ ತಂಗಿ ಮರಳಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಸಾರ್ವಜನಿಕರು ಕಾರ್ಯಾಚರಣೆ ನಡೆಸಿ ಆನೆಗಳನ್ನು ಓಡಿಸುವ ಪ್ರಯತ್ನ ನಡೆಸುದ್ದರೂ ಆನೆಗಳಿಗೆ ಅದು ಮಾಮೂಲಿ ಎಂಬಂತಾಗಿದೆ. ಸಾರ್ವಜನಿಕರು ಪಟಾಕಿ ಸಿಡಿಸಿ, ಚೆಂಡೆ, ತಮಟೆ ಬಾರಿಸಿ, ಬೆಂಕಿ ಉರಿಸಿ ಆನೆಗಳನ್ನು ಹಿಮ್ಮೆಟ್ಟಿಸಲು ಪ್ರಯತ್ನ ನಡೆಸಿದಾಗ ಆನೆಗಳ ಹಿಂಡು ಕ್ಯಾರೇ ಅನ್ನುತ್ತಿಲ್ಲ.

 


ಕತ್ತಲು ಬೀಳುತ್ತಲೆ ಊರಿಗೆ ಬಂದು ಕೃಷಿ ತೋಟದತ್ತ ನುಗ್ಗಿ ಹೊಟ್ಟೆ ತುಂಬಿಸಿ ಸಮೀಪದ ಕಾಡಿಗೆ ವಿಶ್ರಾಂತಿಗೆ ತೆರಳುವ ಆನೆಗಳು ಹೊಟ್ಟೆ ಹಸಿದಾಗ ಮತ್ತೆ ನಾಡಿಗೆ ನುಗ್ಗಿ ಬರುತ್ತದೆ. ಆಕಡೆ ಈ ಕಡೆ ಓಡಾಡುವ ಆನೆಗಳು ಘೀಳಿಟ್ಟು ಜನರಲ್ಲಿ ಭಯದ ವಾತಾವರಣವನ್ನು ಸೃಷ್ಠಿಸುವುದು, ನದಿಯಲ್ಲಿ ಇಳಿದು ಜಳಕವಾಡುವುದು ಇಲ್ಲಿ ಮಾಮೂಲಿ ದೃಶ್ಯಗಳಾಗಿದೆ. ಮೂರು ಮರಿ ಆನೆಗಳು ಸೇರಿ ಬರೋಬರಿ 11 ಆನೆಗಳ ಹಿಂಡು ಪ್ರದೇಶದಲ್ಲಿ ಬೀಡು ಬಿಟ್ಟಿದೆ ಎಂದು ಸಾರ್ವಜನಿಕರು ಹೇಳುತ್ತಾರೆ.


ಕಳೆದ ಅನೇಕ ವರ್ಷದಿಂದೀಚೆಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿ ಪ್ರದೇಶದ ಗ್ರಾಮಗಳು ಕಾಡಾನೆ ಹಾವಳಿಯಿಂದ ನಲುಗಿ ಹೋಗಿದೆ. ಆಗಿಂದಾಗೆ ನಾಡಿಗೆ  ಬರುವ ಕಾಡಾನೆಗಳ ಹಿಂಡು ಮಂಡೆಕೋಲು, ಆಲೆಟ್ಟಿ ಅಜ್ಜಾವರ ಮತ್ತು ನೆರೆಯ ಕೇರಳ ರಾಜ್ಯದ ಗ್ರಾಮಗಳಲ್ಲಿ ಅಪಾರ ಪ್ರಮಾಣದ ಕೃಷಿ ಹಾನಿ ಮಾಡಿದೆ. ಇದೀಗ ಮತ್ತೆ ಆನೆಗಳು ನಾಡಿನಲ್ಲಿ ಬೀಡು ಬಿಟ್ಟಿರುವುದರಿಂದ ಜನರಿಗೆ ಮತ್ತೆ ನಿದ್ರೆಯಿಲ್ಲದ ರಾತ್ರಿ ಬಂದೊದಗಿದೆ.

ಶಾಶ್ವತ ತಡೆ ಮರೀಚಿಕೆಯೇ..?

ಕಳೆದ ಹಲವು ವರ್ಷದಿಂದಲೂ ಅಧಿಕ ಸಮಯದಿಂದ ಮಂಡೆಕೋಲು, ಆಲೆಟ್ಟಿ, ಅಜ್ಜಾವರಗಳಲ್ಲಿ ಆನೆ ದಾಳಿ ಮುಂದುವರಿದಿದ್ದರೂ ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಇನ್ನೂ ಮರೀಚಿಕೆಯಾಗಿದೆ. ಆನೆಗಳು ನಾಡಿಗೆ ಇಳಿಯದಂತೆ ಗ್ರಾಮದ ಸುತ್ತಲೂ ಆನೆ ಕಂದಕ, ಸೌರ ವಿದ್ಯುತ್ ಬೇಲಿ, ರೈಲ್ವೇ ಹಳಿಯ ಕಂಬಿಯ ಬೇಲಿ ನಿರ್ಮಾಣ ಹೀಗೆ ಹಲವು ಪರಿಹಾರ ಕ್ರಮಗಳನ್ನು ಕೈಗೊಳ್ಳುವುದಾಗಿ ಘೋಷಿಸಲಾಗಿತ್ತು. ಈ ಗ್ರಾಮಗಳಲ್ಲಿ ಕೆಲವು ಭಾಗಗಳಲ್ಲಿ ಆನೆ ಕಂದಕಗಳನ್ನು ನಿರ್ಮಿಸಲಾಗಿದೆ. ಆದರೆ ಆನೆ ಹಾವಳಿ ಮಾತ್ರ ನಿಂತಿಲ್ಲ.. ಇದರಿಂದ ಮಂಡೆಕೋಲಿನ ಜನರು ಸದಾ ಗಜ ಭೀತಿಯಲ್ಲಿಯೇ ದಿನ ಕಳೆಯಬೇಕಾಗಿದೆ. ಆನೆಗಳ ಹಿಂಡು ಬಂದರೆ ಸಾರ್ವಜನಿಕರು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ರಾತ್ರಿ-ಹಗಲು ಎನ್ನದೆ ದಿನ ಪೂರ್ತಿ ನಿದ್ರೆಗೆಟ್ಟು ಪಟಾಕಿ ಸಿಡಿಸಿ, ಟಯರ್ ಗೆ ಬೆಂಕಿ ಹಚ್ಚಿ, ತಮಟೆ, ಚೆಂಡೆ ಬಾರಿಸಿ ಆನೆಗಳನ್ನು ಅಟ್ಟುವುದು ಮಾತ್ರ ಉಳಿದಿರುವ ಉಪಾಯ. ಇದು ಒಂದೆರಡು ದಿನದ ಕಥೆಯಲ್ಲ ಹಲವು ವರ್ಷಗಳಿಂದ ಮಂಡೆಕೋಲಿನ ಜನತೆಯ ನಿರಂತರ ವ್ಯಥೆಯಾಗಿದೆ. ಆನೆ ಹಾವಳಿಯನ್ನು ತಡೆಯಲು ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಹಲವು ಬಾರಿ ರಾಜ್ಯ-ಕೇಂದ್ರ ಸರ್ಕಾರಗಳ ಕದ ತಟ್ಟಿದರೂ ಯಾವುದೇ ಪ್ರಯೋಜನವಾಗಿಲ್ಲ, ವಿದ್ಯಾರ್ಥಿನಿಯೋರ್ವಳು ಪ್ರಧಾನಿವರೆಗೆ ಪತ್ರ ಬರೆದರೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎಂಬುದು ಗ್ರಾಮಸ್ಥರ ಅಳಲು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

5 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

6 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

7 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

13 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

19 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago