ಸುಳ್ಯ: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಮುಕ್ಕೂರು ಶಾಲಾ ವಠಾರದಲ್ಲಿ ಆ.18 ರಂದು ನಡೆಯಲಿರುವ ಕ್ರೀಡಾಕೂಟ ಮತ್ತು ಆ.31 ರಂದು ರಾತ್ರಿ ನಡೆಯಲಿರುವ ಹತ್ತರ ಹುತ್ತರಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನ ಹಾಗೂ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಗುರುವಾರ ಬಿಡುಗಡೆಗೊಳಿಸಲಾಯಿತು.
ಪ್ರಾರಂಭದಲ್ಲಿ ಉಭಯ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಅರ್ಚಕರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭ ದಶಮಾನೋತ್ಸವ ಸಮಿತಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಕಾರ್ಯಾಧ್ಯಕ್ಷ ಉಮೇಶ್ ಕೆಎಂಬಿ, ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು, ಕೋಶಾಧಿಕಾರಿ ರಮೇಶ್ ಕಾನಾವು, ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಕೆ.ಎನ್., ಕಾರ್ಯದರ್ಶಿ ಕಿರಣ್, ಕೋಶಾಧಿಕಾರಿ ರಾಮಚಂದ್ರ ಚೆನ್ನಾವರ, ಸಮಿತಿ ಸದಸ್ಯರಾದ ಕುಂಞಣ್ಣ ನಾಯ್ಕ ಅಡ್ಯತಕಂಡ, ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ರಕ್ಷಿತ್ ಗೌಡ ಒರುಂಕು, ಶೀನ ಅನವುಗುಂಡಿ, ವೆಂಕಟರಮಣ ಕುಂಡಡ್ಕ, ರವಿ ಕುಂಡಡ್ಕ, ಶಾರದೋತ್ಸವ ಸಮಿತಿಯ ದಿವಾಕರ ಬೀರುಸಾಗು ಮೊದಲಾದವರು ಉಪಸ್ಥಿತರಿದ್ದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…