ಬೆಳ್ಳಾರೆ: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಮುಕ್ಕೂರು ಶಾಲಾ ವಠಾರದಲ್ಲಿ ಪ್ರದರ್ಶನಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನ ಮುದಗೊಳಿಸಿತು.
ಆರಂಭದಲ್ಲಿ ಮುಕ್ಕೂರು ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಪ್ರದರ್ಶನಗೊಂಡಿತ್ತು. ಅನಂತರ ಅವನಿ ಕೋಡಿಬೈಲು ಅವರಿಂದ ಶಿವನ ಕುರಿತಾದ ವರ್ಣನೆಯ ಭರತನಾಟ್ಯ ಮತ್ತು ತ್ರಿನಯನ ನಾಟ್ಯಾಲಯದ ವಿದುಷಿ ಆರಾಧತಾ ಕಾಯರ್ಮಾರ್ ಅವರ ಭರತನಾಟ್ಯ ಪ್ರೇಕ್ಷಕ ವರ್ಗದ ಕಣ್ಮನ ಸೆಳೆಯಿತು.
ಅದಾದ ಬಳಿಕ ಕನ್ನಡ ಕೋಗಿಲೆ ಖ್ಯಾತಿಯ ಅಖಿಲಾ ಪಜಿಮಣ್ಣು ಮತ್ತು ಅಪೇಕ್ಷಾ ಪೈ ಕಾಸರಗೋಡು ಅವರಿಂದ ಒಂದುವರೆ ಗಂಟೆಗಳ ಕಾಲ ನಡೆದ ಗಾನಯಾನ ಸಂಗೀತ ರಸಸಂಜೆ ಸಬಿಕರ ಮನ ತಣಿಸಿತು. ರಂಗದರಾಜೆ ಸುಂದರ ರೈ ಮಂದಾರ ಅವರ ನಿರ್ದೇಶನ ಮತ್ತು ಅಭಿನಯದ ಬಲೆ ತೆಲಿಪಾಲೆ ಕಾಮಿಡಿ ಎಕ್ಸ್ಪ್ರೆಸ್ ಕಾರ್ಯಕ್ರಮವು ನೋಡುಗರ ಪ್ರಶಂಸೆಗೆ ಪಾತ್ರವಾಯಿತು. ಸಾವಿರಕ್ಕೂ ಅಧಿಕ ಮಂದಿ ಪ್ರೇಕ್ಷಕರು ಸಾಂಸ್ಕೃತಿಕ ಸಂಭ್ರಮವನ್ನು ಕಣ್ತುಂಬಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಿಕ್ಷಕ ಶಶಿಕುಮಾರ್ ಬಿ.ಎನ್. ನಿರೂಪಿಸಿದರು.
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…