ಬೆಳ್ಳಾರೆ: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಮುಕ್ಕೂರು ಶಾಲಾ ವಠಾರದಲ್ಲಿ ಪ್ರದರ್ಶನಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನ ಮುದಗೊಳಿಸಿತು.
ಆರಂಭದಲ್ಲಿ ಮುಕ್ಕೂರು ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಪ್ರದರ್ಶನಗೊಂಡಿತ್ತು. ಅನಂತರ ಅವನಿ ಕೋಡಿಬೈಲು ಅವರಿಂದ ಶಿವನ ಕುರಿತಾದ ವರ್ಣನೆಯ ಭರತನಾಟ್ಯ ಮತ್ತು ತ್ರಿನಯನ ನಾಟ್ಯಾಲಯದ ವಿದುಷಿ ಆರಾಧತಾ ಕಾಯರ್ಮಾರ್ ಅವರ ಭರತನಾಟ್ಯ ಪ್ರೇಕ್ಷಕ ವರ್ಗದ ಕಣ್ಮನ ಸೆಳೆಯಿತು.
ಅದಾದ ಬಳಿಕ ಕನ್ನಡ ಕೋಗಿಲೆ ಖ್ಯಾತಿಯ ಅಖಿಲಾ ಪಜಿಮಣ್ಣು ಮತ್ತು ಅಪೇಕ್ಷಾ ಪೈ ಕಾಸರಗೋಡು ಅವರಿಂದ ಒಂದುವರೆ ಗಂಟೆಗಳ ಕಾಲ ನಡೆದ ಗಾನಯಾನ ಸಂಗೀತ ರಸಸಂಜೆ ಸಬಿಕರ ಮನ ತಣಿಸಿತು. ರಂಗದರಾಜೆ ಸುಂದರ ರೈ ಮಂದಾರ ಅವರ ನಿರ್ದೇಶನ ಮತ್ತು ಅಭಿನಯದ ಬಲೆ ತೆಲಿಪಾಲೆ ಕಾಮಿಡಿ ಎಕ್ಸ್ಪ್ರೆಸ್ ಕಾರ್ಯಕ್ರಮವು ನೋಡುಗರ ಪ್ರಶಂಸೆಗೆ ಪಾತ್ರವಾಯಿತು. ಸಾವಿರಕ್ಕೂ ಅಧಿಕ ಮಂದಿ ಪ್ರೇಕ್ಷಕರು ಸಾಂಸ್ಕೃತಿಕ ಸಂಭ್ರಮವನ್ನು ಕಣ್ತುಂಬಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಿಕ್ಷಕ ಶಶಿಕುಮಾರ್ ಬಿ.ಎನ್. ನಿರೂಪಿಸಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…