ಬೆಳ್ಳಾರೆ: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಮುಕ್ಕೂರು ಶಾಲಾ ವಠಾರದಲ್ಲಿ ಪ್ರದರ್ಶನಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನ ಮುದಗೊಳಿಸಿತು.
ಆರಂಭದಲ್ಲಿ ಮುಕ್ಕೂರು ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಪ್ರದರ್ಶನಗೊಂಡಿತ್ತು. ಅನಂತರ ಅವನಿ ಕೋಡಿಬೈಲು ಅವರಿಂದ ಶಿವನ ಕುರಿತಾದ ವರ್ಣನೆಯ ಭರತನಾಟ್ಯ ಮತ್ತು ತ್ರಿನಯನ ನಾಟ್ಯಾಲಯದ ವಿದುಷಿ ಆರಾಧತಾ ಕಾಯರ್ಮಾರ್ ಅವರ ಭರತನಾಟ್ಯ ಪ್ರೇಕ್ಷಕ ವರ್ಗದ ಕಣ್ಮನ ಸೆಳೆಯಿತು.
ಅದಾದ ಬಳಿಕ ಕನ್ನಡ ಕೋಗಿಲೆ ಖ್ಯಾತಿಯ ಅಖಿಲಾ ಪಜಿಮಣ್ಣು ಮತ್ತು ಅಪೇಕ್ಷಾ ಪೈ ಕಾಸರಗೋಡು ಅವರಿಂದ ಒಂದುವರೆ ಗಂಟೆಗಳ ಕಾಲ ನಡೆದ ಗಾನಯಾನ ಸಂಗೀತ ರಸಸಂಜೆ ಸಬಿಕರ ಮನ ತಣಿಸಿತು. ರಂಗದರಾಜೆ ಸುಂದರ ರೈ ಮಂದಾರ ಅವರ ನಿರ್ದೇಶನ ಮತ್ತು ಅಭಿನಯದ ಬಲೆ ತೆಲಿಪಾಲೆ ಕಾಮಿಡಿ ಎಕ್ಸ್ಪ್ರೆಸ್ ಕಾರ್ಯಕ್ರಮವು ನೋಡುಗರ ಪ್ರಶಂಸೆಗೆ ಪಾತ್ರವಾಯಿತು. ಸಾವಿರಕ್ಕೂ ಅಧಿಕ ಮಂದಿ ಪ್ರೇಕ್ಷಕರು ಸಾಂಸ್ಕೃತಿಕ ಸಂಭ್ರಮವನ್ನು ಕಣ್ತುಂಬಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಿಕ್ಷಕ ಶಶಿಕುಮಾರ್ ಬಿ.ಎನ್. ನಿರೂಪಿಸಿದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…