ಬೆಳ್ಳಾರೆ: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಮುಕ್ಕೂರು ಶಾಲಾ ವಠಾರದಲ್ಲಿ ಪ್ರದರ್ಶನಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನ ಮುದಗೊಳಿಸಿತು.
ಆರಂಭದಲ್ಲಿ ಮುಕ್ಕೂರು ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಪ್ರದರ್ಶನಗೊಂಡಿತ್ತು. ಅನಂತರ ಅವನಿ ಕೋಡಿಬೈಲು ಅವರಿಂದ ಶಿವನ ಕುರಿತಾದ ವರ್ಣನೆಯ ಭರತನಾಟ್ಯ ಮತ್ತು ತ್ರಿನಯನ ನಾಟ್ಯಾಲಯದ ವಿದುಷಿ ಆರಾಧತಾ ಕಾಯರ್ಮಾರ್ ಅವರ ಭರತನಾಟ್ಯ ಪ್ರೇಕ್ಷಕ ವರ್ಗದ ಕಣ್ಮನ ಸೆಳೆಯಿತು.
ಅದಾದ ಬಳಿಕ ಕನ್ನಡ ಕೋಗಿಲೆ ಖ್ಯಾತಿಯ ಅಖಿಲಾ ಪಜಿಮಣ್ಣು ಮತ್ತು ಅಪೇಕ್ಷಾ ಪೈ ಕಾಸರಗೋಡು ಅವರಿಂದ ಒಂದುವರೆ ಗಂಟೆಗಳ ಕಾಲ ನಡೆದ ಗಾನಯಾನ ಸಂಗೀತ ರಸಸಂಜೆ ಸಬಿಕರ ಮನ ತಣಿಸಿತು. ರಂಗದರಾಜೆ ಸುಂದರ ರೈ ಮಂದಾರ ಅವರ ನಿರ್ದೇಶನ ಮತ್ತು ಅಭಿನಯದ ಬಲೆ ತೆಲಿಪಾಲೆ ಕಾಮಿಡಿ ಎಕ್ಸ್ಪ್ರೆಸ್ ಕಾರ್ಯಕ್ರಮವು ನೋಡುಗರ ಪ್ರಶಂಸೆಗೆ ಪಾತ್ರವಾಯಿತು. ಸಾವಿರಕ್ಕೂ ಅಧಿಕ ಮಂದಿ ಪ್ರೇಕ್ಷಕರು ಸಾಂಸ್ಕೃತಿಕ ಸಂಭ್ರಮವನ್ನು ಕಣ್ತುಂಬಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಿಕ್ಷಕ ಶಶಿಕುಮಾರ್ ಬಿ.ಎನ್. ನಿರೂಪಿಸಿದರು.
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…