Advertisement
ಸಾಂಸ್ಕೃತಿಕ

ಗಣೇಶೋತ್ಸವ ಹತ್ತರ ಹುತ್ತರಿ ಸಮಾರಂಭ : ಮನ ಮುದಗೊಳಿಸಿದ ಸಾಂಸ್ಕೃತಿಕ ವೈಭವ..!

Share

ಬೆಳ್ಳಾರೆ: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಮುಕ್ಕೂರು ಶಾಲಾ ವಠಾರದಲ್ಲಿ ಪ್ರದರ್ಶನಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನ ಮುದಗೊಳಿಸಿತು.

 

ಆರಂಭದಲ್ಲಿ ಮುಕ್ಕೂರು ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಪ್ರದರ್ಶನಗೊಂಡಿತ್ತು. ಅನಂತರ ಅವನಿ ಕೋಡಿಬೈಲು ಅವರಿಂದ ಶಿವನ ಕುರಿತಾದ ವರ್ಣನೆಯ ಭರತನಾಟ್ಯ ಮತ್ತು ತ್ರಿನಯನ ನಾಟ್ಯಾಲಯದ ವಿದುಷಿ ಆರಾಧತಾ ಕಾಯರ್‍ಮಾರ್ ಅವರ ಭರತನಾಟ್ಯ ಪ್ರೇಕ್ಷಕ ವರ್ಗದ ಕಣ್ಮನ ಸೆಳೆಯಿತು.

ಅದಾದ ಬಳಿಕ ಕನ್ನಡ ಕೋಗಿಲೆ ಖ್ಯಾತಿಯ ಅಖಿಲಾ ಪಜಿಮಣ್ಣು ಮತ್ತು ಅಪೇಕ್ಷಾ ಪೈ ಕಾಸರಗೋಡು ಅವರಿಂದ ಒಂದುವರೆ ಗಂಟೆಗಳ ಕಾಲ ನಡೆದ ಗಾನಯಾನ ಸಂಗೀತ ರಸಸಂಜೆ ಸಬಿಕರ ಮನ ತಣಿಸಿತು. ರಂಗದರಾಜೆ ಸುಂದರ ರೈ ಮಂದಾರ ಅವರ ನಿರ್ದೇಶನ ಮತ್ತು ಅಭಿನಯದ ಬಲೆ ತೆಲಿಪಾಲೆ ಕಾಮಿಡಿ ಎಕ್ಸ್‍ಪ್ರೆಸ್ ಕಾರ್ಯಕ್ರಮವು ನೋಡುಗರ ಪ್ರಶಂಸೆಗೆ ಪಾತ್ರವಾಯಿತು. ಸಾವಿರಕ್ಕೂ ಅಧಿಕ ಮಂದಿ ಪ್ರೇಕ್ಷಕರು ಸಾಂಸ್ಕೃತಿಕ ಸಂಭ್ರಮವನ್ನು ಕಣ್ತುಂಬಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಿಕ್ಷಕ ಶಶಿಕುಮಾರ್ ಬಿ.ಎನ್. ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

21 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

21 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

21 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

21 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

22 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago