ಬೆಳ್ಳಾರೆ: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಮುಕ್ಕೂರು ಶಾಲಾ ವಠಾರದಲ್ಲಿ ಪ್ರದರ್ಶನಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನ ಮುದಗೊಳಿಸಿತು.
ಆರಂಭದಲ್ಲಿ ಮುಕ್ಕೂರು ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಪ್ರದರ್ಶನಗೊಂಡಿತ್ತು. ಅನಂತರ ಅವನಿ ಕೋಡಿಬೈಲು ಅವರಿಂದ ಶಿವನ ಕುರಿತಾದ ವರ್ಣನೆಯ ಭರತನಾಟ್ಯ ಮತ್ತು ತ್ರಿನಯನ ನಾಟ್ಯಾಲಯದ ವಿದುಷಿ ಆರಾಧತಾ ಕಾಯರ್ಮಾರ್ ಅವರ ಭರತನಾಟ್ಯ ಪ್ರೇಕ್ಷಕ ವರ್ಗದ ಕಣ್ಮನ ಸೆಳೆಯಿತು.
ಅದಾದ ಬಳಿಕ ಕನ್ನಡ ಕೋಗಿಲೆ ಖ್ಯಾತಿಯ ಅಖಿಲಾ ಪಜಿಮಣ್ಣು ಮತ್ತು ಅಪೇಕ್ಷಾ ಪೈ ಕಾಸರಗೋಡು ಅವರಿಂದ ಒಂದುವರೆ ಗಂಟೆಗಳ ಕಾಲ ನಡೆದ ಗಾನಯಾನ ಸಂಗೀತ ರಸಸಂಜೆ ಸಬಿಕರ ಮನ ತಣಿಸಿತು. ರಂಗದರಾಜೆ ಸುಂದರ ರೈ ಮಂದಾರ ಅವರ ನಿರ್ದೇಶನ ಮತ್ತು ಅಭಿನಯದ ಬಲೆ ತೆಲಿಪಾಲೆ ಕಾಮಿಡಿ ಎಕ್ಸ್ಪ್ರೆಸ್ ಕಾರ್ಯಕ್ರಮವು ನೋಡುಗರ ಪ್ರಶಂಸೆಗೆ ಪಾತ್ರವಾಯಿತು. ಸಾವಿರಕ್ಕೂ ಅಧಿಕ ಮಂದಿ ಪ್ರೇಕ್ಷಕರು ಸಾಂಸ್ಕೃತಿಕ ಸಂಭ್ರಮವನ್ನು ಕಣ್ತುಂಬಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಿಕ್ಷಕ ಶಶಿಕುಮಾರ್ ಬಿ.ಎನ್. ನಿರೂಪಿಸಿದರು.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…