Advertisement
ಧಾರ್ಮಿಕ

ಗಣೇಶ ಹಬ್ಬ | ಬಯಲು ಆಲಯದ ಗಣಪ

Share

ಹಬ್ಬ ಬಂತೆಂದರೆ ಮನೆಮನಗಳಲ್ಲಿ ಸಂಭ್ರಮದ ವಾತಾವರಣ. ದಿನನಿತ್ಯದ ಬದುಕಿನ ಜಂಜಾಟಗಳನ್ನು ಬದಿಗಿಟ್ಟು ಮನೆಮಂದಿ ಎಲ್ಲಾಒಟ್ಟಾಗಿ ಸೇರಿಹಬ್ಬದ ಆಚರಣೆ ಜೊತೆಗೆ ಭೂರಿಭೋಜನ ಮಾಡುವ ಸದಾವಕಾಶ ದೊರೆಯುವುದು ಇಂತಹ ಸಂದರ್ಭಗಳಲ್ಲಿಯೇ. ಅದರಲ್ಲೂ ತಿಂಡಿ ಪ್ರಿಯನಾದ ಗಣೇಶನ ಹಬ್ಬದಲ್ಲಿ ಬಗೆಬಗೆಯ ತಿಂಡಿಗಳಿಗೆ ತುಸು ಹೆಚ್ಚಿನ ಪ್ರಾಧಾನ್ಯತೆಎಂದರೆತಪ್ಪಲ್ಲ.

ಭಾರತಾದ್ಯಂತ ಅದ್ಧೂರಿಯಾಗಿ ಆಚರಿಸುವ ಹಬ್ಬವಾದ ಗಣೇಶಚೌತಿ ಅಂದಾಕ್ಷಣ  ಮೊದಲು ನೆನಪಾಗುವುದು  “ಶ್ರೀ ಕ್ಷೇತ್ರ ಸೌತಡ್ಕ”.
ನಾವು ನೋಡಿದಂತೆ ಹೆಚ್ಚಿನ ಎಲ್ಲಾ ದೇವಸ್ಥಾನಗಳಲ್ಲೂ ದೇವರನ್ನುಗರ್ಭಗುಡಿಯಲ್ಲಿಟ್ಟು ಪೂಜಿಸಲಾಗುತ್ತದೆ.ಆದರೆ ಬೆಳ್ತಂಗಡಿ ತಾಲೂಕಿನ ಊರುಕೊಕ್ಕಡಕ್ಕೆ ಸನಿಹವಾದ “ಸೌತಡ್ಕ”ದಲ್ಲಿ ನೆಲೆಸಿರುವ ಗಣಪ ಮಾತ್ರ ಸಕಲ ಜೀವರಾಶಿಗಳಿಗೂ ಮುಕ್ತವಾಗಿ ದರ್ಶನ ನೀಡುತ್ತಾಎಲ್ಲರಿಗಿಂತ ಭಿನ್ನನೆನಿಸಿಕೊಂಡಿದ್ದಾನೆ.

ಇತಿಹಾಸದ ಪ್ರಕಾರ ಸುಮಾರು 800 ವರ್ಷಗಳ ಹಿಂದೆರಾಜರ ಆಳ್ವಿಕೆಯಲ್ಲಿ ರಾಜವಂಶಸ್ಥರಿಗೆ ಸೇರಿದ ದೇವಾಲಯ ಈ ಊರಿನಲ್ಲಿಇತ್ತಂತೆ. ಕಾಲಾನಂತರ ಈ ದೇವಸ್ಥಾನವು ಸಂಗ್ರಾಮವೊಂದರಲ್ಲಿ ನಾಶವಾಯಿತು. ಹಲವು ವರ್ಷಗಳ ನಂತರ ಗೋವನ್ನು ಮೇಯಿಸುತ್ತಿದ್ದ ಬಾಲಕರಿಗೆ ಸುಂದರವಾದ ಗಣೇಶನ ವಿಗ್ರಹವೊಂದು ದೊರೆಯಿತು. ಅವರು ಪ್ರಸ್ತುತ ಈಗ ಇರುವ ಮರದ ಬುಡಕ್ಕೆ ವಿಗ್ರಹವನ್ನುತಂದುಇಟ್ಟು, ತಮ್ಮಜಾಗದಲ್ಲಿ ಬೆಳೆದಿದ್ದ ಸೌತೆಕಾಯಿಗಳನ್ನು ತಂದು ಪ್ರತಿದಿನ ಪೂಜಿಸುತ್ತಿದ್ದರು.ಅಂದಿನಿಂದ ಈ ಪ್ರದೇಶ “ಸೌತಡ್ಕ” ಎಂದು ಪ್ರಸಿದ್ದಿಯಾಯಿತು ಎನ್ನುತ್ತದೆ ಸ್ಥಳ ಪುರಾಣ.

ತದ ನಂತರ ಇಲ್ಲಿಯ ಬ್ರಾಹ್ಮಣರೊಬ್ಬರು ಗಣೇಶನಿಗೆ ಗೋಪುರ ಕಟ್ಟಲು ನಿರ್ಧರಿಸಿದಾಗ ದೇವರು ದನ ಮೇಯಿಸುವ ಬಾಲಕನ ರೂಪದಲ್ಲಿ ಕನಸಿನಲ್ಲಿ ಬಂದು ತನಗೆ ಗೋಪುರ ಕಟ್ಟಿಸುವುದಾದರೆ ಕಾಶಿಯಲ್ಲಿರುವ ತನ್ನತಂದೆ ವಿಶ್ವನಾಥನಿಗೆ ಕಾಣಿಸುವಷ್ಟುಎತ್ತರದ ಗೋಪುರವನ್ನು ದಿನ ಬೆಳಗಾಗುವುದರೊಳಗಾಗಿ ಕಟ್ಟಬೇಕು ಎಂದು ಹೇಳದನಂತೆ. ಅಂದಿನಿಂದ ಇಲ್ಲಿಗೋಪುರ ಕಟ್ಟುವ ನಿರ್ಧಾರವನ್ನು ಕೈ ಬಿಡಲಾಯಿತು.ಹೀಗಾಗಿ ಇಲ್ಲಿಗಣೇಶ ವರ್ಷದ 365 ದಿನವೂ ಭಕ್ತರಿಗೆ ಮುಕ್ತವಾಗಿ ದರ್ಶನ ನೀಡುತ್ತಾನೆ.

ಇಂದು ನಾವು ಅಲ್ಲಲ್ಲಿ ಸಾರ್ವಜನಿಕವಾಗಿ ಗಣೇಶನ ಮೂರ್ತಿಗಳನ್ನು ಇಟ್ಟು ಪೂಜಿಸುವುದನ್ನು ಕಾಣುತ್ತೇವೆ. ಆದರೆ ಕೊಕ್ಕಡದ ಪರಿಸರದಲ್ಲಿ ಗಣೇಶ ಎಂದರೆ ಅದು “ಸೌತಡ್ಕ ಮಹಾಗಣಪತಿ”.ಈ ಪರಿಸರದ ಜನ ತಮ್ಮ ಮನೆಗಳಲ್ಲಿ ಅಪ್ಪ, ಪಂಕಜ್ಜಾಯ, ಮೋದಕ ಇತ್ಯಾದಿ ಬಗೆ ಬಗೆಯ ಭಕ್ಷ್ಯಗಳನ್ನು ಮಾಡಿ ಸೌತಡ್ಕದ ಗಣೇಶನಿಗೆ ಅರ್ಪಿಸಿದ ನಂತರ ಪ್ರಸಾದವಾಗಿ ಸೇವಿಸುತ್ತಾರೆ. ಪ್ರಸಿದ್ಧಿ ಪಡೆದಿರುವ ಇಲ್ಲಿಯ ಗಣೇಶನಿಗೆ ಚೌತಿಯ ದಿನದಂದು 108 ತೆಂಗಿನ ಕಾಯಿಗಳ ಗಣಪತಿಹೋಮ, ಪಂಚಾಮೃತದೊಂದಿಗೆ 108 ಸೀಯಾಳ ಅಭೀಷೇಕ ಅಪ್ಪ, ಪಂಜಕಜ್ಜಾಯ, ಪಾಯಸ, ನೈವೇಧ್ಯ, ಹಣ್ಣು ಹಂಪಲು ತಾಂಬೂಲ ಸಮರ್ಪಿಸಲಾಗುತ್ತದೆ.

# ವಂದನಾರವಿ ಕೆ.ವೈ.ವೇಣೂರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

3 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

5 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

6 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

9 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

10 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

13 hours ago