Advertisement
ಧಾರ್ಮಿಕ

ಗರ್ಭಗುಡಿಯಲ್ಲಿರುವ ದೇವರನ್ನು ಎಲ್ಲೆಡೆಯೂ ಕಾಣುವ ಮಟ್ಟಕ್ಕೆ ಬೆಳೆದಾಗಲೇ ಸತ್ಯದ ಸಾಕ್ಷಾತ್ಕಾರ: ಉದಯ ಭಾಸ್ಕರ್ ಸುಳ್ಯ

Share

ಸಂಪಾಜೆ: “ದೇವರೆಲ್ಲಿದ್ದಾನೆ ಅನ್ನುವ ಪ್ರಶ್ನೆ ಬಂದಾಗ ನಾವೆಲ್ಲ ಸುಲಭದಲ್ಲಿ ದೇವಸ್ಥಾನದ ಗರ್ಭಗುಡಿಯ ಕಡೆಗೆ ಬೊಟ್ಟು ಮಾಡಿ ತೋರಿಸುತ್ತೇವೆ. ಆದರೆ ದೇವರು ಕೇವಲ ಗರ್ಭಗುಡಿಯಲ್ಲಿ‌ ಕುಳಿತಿಲ್ಲ, ಆತ ನಮ್ಮೊಳಗೆ ಶಕ್ತಿ ರೂಪದಲ್ಲಿ ತುಂಬಿಕೊಂಡಿದ್ದಾನೆ. ಗರ್ಭಗುಡಿಯ ಭಗವಂತನನ್ನು ನಮ್ಮೆದೆಯಲ್ಲೂ ಕಂಡುಕೊಳ್ಳಬೇಕು, ನಮ್ಮೆದೆಯಲ್ಲಿರುವ ಭಗವಂತನನ್ನು ಸಕಲ ಜೀವರಾಶಿಗಳಲ್ಲಿ, ಚರಾಚರ ವಸ್ತುಗಳಲ್ಲೂ ಕಾಣುವಂತಹ ಮಟ್ಟಕ್ಕೆ ನಾವು ಬೆಳೆಯಬೇಕು. ಆಗ ಮಾತ್ರವೇ ಸತ್ಯದ ಬಾಗಿಲು ತೆರೆದುಕೊಳ್ಳುತ್ತದೆ. ಆಗಲೇ ಭಗವಂತನ ಸಾಕ್ಷಾತ್ಕಾರ ಸಾಧ್ಯ” ಎಂದು ಸಿರಿಗನ್ನಡ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷರಾದ ಉದಯಭಾಸ್ಕರ್ ಸುಳ್ಯ ಅಭಿಪ್ರಾಯಪಟ್ಟರು.

 

ಸಾರ್ವಜನಿಕ ಶ್ರೀದೇವತಾರಾಧನಾ ಸಮಿತಿ ಸಂಪಾಜೆ ಇದರ ವತಿಯಿಂದ ಸಂಪಾಜೆಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾದ 25 ನೇ ವರ್ಷದ ಗೌರೀ ಗಣೇಶೋತ್ಸವದ ವೇದಿಕೆಯಲ್ಲಿ ಧಾರ್ಮಿಕ ಉಪನ್ಯಾಸ ನಡೆಸಿಕೊಟ್ಟ ಅವರು, “ಗಣೇಶನನ್ನು ಪ್ರತಿಷ್ಠಾಪಿಸಲ್ಪಟ್ಟ‌ ವೇದಿಕೆಯಲ್ಲಿ ಸಾತ್ವಿಕ ಚಿಂತನೆಗಳು ನಡೆಯಬೇಕು, ಭಗವಂತನ ನಾಮಸ್ಮರಣೆ ನಡೆಯಬೇಕು, ಅದಿಲ್ಲದೇ ಅನ್ಯ ಚಿಂತನೆಯಲ್ಲಿ ಮುಳುಗಿದರೆ ಗಣೇಶನ ಕೃಪೆಯ ಬದಲಿಗೆ ಅವಕೃಪೆಯಾಗುವ ಸಾಧ್ಯತೆಗಳೇ ಹೆಚ್ಚು. ಊರಿನಲ್ಲೊಂದು ಹೊಸದಾದ ಭಜನಾ ತಂಡ ತಲೆಯೆತ್ತಲ್ಪಟ್ಟಿದೆ ಅಂದರೆ ಆ ಊರಿನ ಸಂಸ್ಕಾರ ಕೇಂದ್ರಗಳು ಜಾಗೃತಗೊಳ್ಳುತ್ತಿವೆ ಎಂದರ್ಥ” ಎಂದು ಹೇಳಿದರು‌.

 

ಈ ಸಂದರ್ಭದಲ್ಲಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ದೇವಿಪ್ರಸಾದ್ ಎನ್.ಎಸ್, ದೇವತಾರಾಧನಾ ಸಮಿತಿಯ ಗೌರವಾಧ್ಯಕ್ಷರಾದ ಬಿ.ಆರ್.ಶಿವರಾಮ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ ಚಿದ್ಕಾರು, ಮಡಿಕೇರಿ ಎ.ಪಿ.ಎಂ.ಸಿ ಸದಸ್ಯರಾದ ದೇವಪ್ಪ ಕೆ.ಕೆ, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಇದರ ಒಕ್ಕೂಟ ಅಧ್ಯಕ್ಷೆಯಾದ ಶ್ರೀಮತಿ ವಾಣಿ ಜಗದೀಶ್ ಕೆದಂಬಾಡಿ, ಓ.ಆರ್. ಮಾಯಿಲಪ್ಪ, ಬಿ.ಆರ್.ಸುಂದರ ಮತ್ತಿತರ ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

8 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

9 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

9 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

15 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

17 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

22 hours ago