Advertisement
ಧಾರ್ಮಿಕ

ಗರ್ಭಗುಡಿಯಲ್ಲಿರುವ ದೇವರನ್ನು ಎಲ್ಲೆಡೆಯೂ ಕಾಣುವ ಮಟ್ಟಕ್ಕೆ ಬೆಳೆದಾಗಲೇ ಸತ್ಯದ ಸಾಕ್ಷಾತ್ಕಾರ: ಉದಯ ಭಾಸ್ಕರ್ ಸುಳ್ಯ

Share

ಸಂಪಾಜೆ: “ದೇವರೆಲ್ಲಿದ್ದಾನೆ ಅನ್ನುವ ಪ್ರಶ್ನೆ ಬಂದಾಗ ನಾವೆಲ್ಲ ಸುಲಭದಲ್ಲಿ ದೇವಸ್ಥಾನದ ಗರ್ಭಗುಡಿಯ ಕಡೆಗೆ ಬೊಟ್ಟು ಮಾಡಿ ತೋರಿಸುತ್ತೇವೆ. ಆದರೆ ದೇವರು ಕೇವಲ ಗರ್ಭಗುಡಿಯಲ್ಲಿ‌ ಕುಳಿತಿಲ್ಲ, ಆತ ನಮ್ಮೊಳಗೆ ಶಕ್ತಿ ರೂಪದಲ್ಲಿ ತುಂಬಿಕೊಂಡಿದ್ದಾನೆ. ಗರ್ಭಗುಡಿಯ ಭಗವಂತನನ್ನು ನಮ್ಮೆದೆಯಲ್ಲೂ ಕಂಡುಕೊಳ್ಳಬೇಕು, ನಮ್ಮೆದೆಯಲ್ಲಿರುವ ಭಗವಂತನನ್ನು ಸಕಲ ಜೀವರಾಶಿಗಳಲ್ಲಿ, ಚರಾಚರ ವಸ್ತುಗಳಲ್ಲೂ ಕಾಣುವಂತಹ ಮಟ್ಟಕ್ಕೆ ನಾವು ಬೆಳೆಯಬೇಕು. ಆಗ ಮಾತ್ರವೇ ಸತ್ಯದ ಬಾಗಿಲು ತೆರೆದುಕೊಳ್ಳುತ್ತದೆ. ಆಗಲೇ ಭಗವಂತನ ಸಾಕ್ಷಾತ್ಕಾರ ಸಾಧ್ಯ” ಎಂದು ಸಿರಿಗನ್ನಡ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷರಾದ ಉದಯಭಾಸ್ಕರ್ ಸುಳ್ಯ ಅಭಿಪ್ರಾಯಪಟ್ಟರು.

 

ಸಾರ್ವಜನಿಕ ಶ್ರೀದೇವತಾರಾಧನಾ ಸಮಿತಿ ಸಂಪಾಜೆ ಇದರ ವತಿಯಿಂದ ಸಂಪಾಜೆಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾದ 25 ನೇ ವರ್ಷದ ಗೌರೀ ಗಣೇಶೋತ್ಸವದ ವೇದಿಕೆಯಲ್ಲಿ ಧಾರ್ಮಿಕ ಉಪನ್ಯಾಸ ನಡೆಸಿಕೊಟ್ಟ ಅವರು, “ಗಣೇಶನನ್ನು ಪ್ರತಿಷ್ಠಾಪಿಸಲ್ಪಟ್ಟ‌ ವೇದಿಕೆಯಲ್ಲಿ ಸಾತ್ವಿಕ ಚಿಂತನೆಗಳು ನಡೆಯಬೇಕು, ಭಗವಂತನ ನಾಮಸ್ಮರಣೆ ನಡೆಯಬೇಕು, ಅದಿಲ್ಲದೇ ಅನ್ಯ ಚಿಂತನೆಯಲ್ಲಿ ಮುಳುಗಿದರೆ ಗಣೇಶನ ಕೃಪೆಯ ಬದಲಿಗೆ ಅವಕೃಪೆಯಾಗುವ ಸಾಧ್ಯತೆಗಳೇ ಹೆಚ್ಚು. ಊರಿನಲ್ಲೊಂದು ಹೊಸದಾದ ಭಜನಾ ತಂಡ ತಲೆಯೆತ್ತಲ್ಪಟ್ಟಿದೆ ಅಂದರೆ ಆ ಊರಿನ ಸಂಸ್ಕಾರ ಕೇಂದ್ರಗಳು ಜಾಗೃತಗೊಳ್ಳುತ್ತಿವೆ ಎಂದರ್ಥ” ಎಂದು ಹೇಳಿದರು‌.

 

ಈ ಸಂದರ್ಭದಲ್ಲಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ದೇವಿಪ್ರಸಾದ್ ಎನ್.ಎಸ್, ದೇವತಾರಾಧನಾ ಸಮಿತಿಯ ಗೌರವಾಧ್ಯಕ್ಷರಾದ ಬಿ.ಆರ್.ಶಿವರಾಮ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ ಚಿದ್ಕಾರು, ಮಡಿಕೇರಿ ಎ.ಪಿ.ಎಂ.ಸಿ ಸದಸ್ಯರಾದ ದೇವಪ್ಪ ಕೆ.ಕೆ, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಇದರ ಒಕ್ಕೂಟ ಅಧ್ಯಕ್ಷೆಯಾದ ಶ್ರೀಮತಿ ವಾಣಿ ಜಗದೀಶ್ ಕೆದಂಬಾಡಿ, ಓ.ಆರ್. ಮಾಯಿಲಪ್ಪ, ಬಿ.ಆರ್.ಸುಂದರ ಮತ್ತಿತರ ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

2 hours ago

ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?

ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…

2 hours ago

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

13 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

14 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

21 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

1 day ago