ಗರ್ಭಪಾತಕ್ಕೆ ನೀಡಲಾಗಿದ್ದ ಗರಿಷ್ಠ ಅವಧಿಯ ಮಿತಿಯನ್ನು 20 ರಿಂದ 24 ವಾರಗಳಿಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮತಿ ನೀಡಿದೆ.
ಈ ಮೂಲಕ ತಾಯ್ತನದ ಮರಣ ಪ್ರಮಾಣ ಕಡಿಮೆ ಮಾಡುವುದು, ಮಹಿಳೆಯರ ಹಕ್ಕು, ಗರ್ಭಪಾತಕ್ಕೆ ಅವಕಾಶ ನೀಡುವ ಗರಿಷ್ಠ ಅವಧಿಯ ಮಿತಿಯನ್ನು ಹೆಚ್ಚಿಸುವುದು ಗರ್ಭದ ಸುರಕ್ಷಿತ ನಿರ್ಮೂಲನೆಯನ್ನು ಖಾತರಿಪಡಿಸಲಿದೆ ಮತ್ತು ಮಹಿಳೆಯರಿಗೆ ತಮ್ಮ ದೇಹದಲ್ಲಿ ಸಂತಾನೋತ್ಪತ್ತಿಯ ಹಕ್ಕನ್ನು ನೀಡುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ವೈದ್ಯಕೀಯ ಗರ್ಭಪಾತ ಕಾಯ್ದೆ, 1971ಕ್ಕೆ ತಿದ್ದುಪಡಿ ತರುವ ವೈದ್ಯಕೀಯ ಗರ್ಭಪಾತ (ತಿದ್ದುಪಡಿ) ಮಸೂದೆ, 2020ಕ್ಕೆ ಸಂಪುಟ ಅನುಮೋದನೆ ನೀಡಿದೆ. ಈ ಮಸೂದೆಯನ್ನು ಮುಂಬರುವ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ.
ಗರ್ಭಪಾತಕ್ಕೆ 20 ವಾರಗಳ ಸಮಯ ಮಿತಿಯನ್ನು ನಿಗದಿಗೊಳಿಸಿರುವ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಕಳೆದ ಸಲ್ಲಿಸಲಾಗಿದ್ದ ಅರ್ಜಿಗೆ ಸೆಪ್ಟೆಂಬರ್ನಲ್ಲಿ ಪ್ರತಿಕ್ರಿಯೆ ನೀಡಿದ್ದ ಸರ್ಕಾರ, ಗರ್ಭದಲ್ಲಿರುವ ಭ್ರೂಣದ ಜೀವ ರಕ್ಷಣೆ ನಾಗರಿಕರ ಪೋಷಕನಾದ ತನ್ನ ಕರ್ತವ್ಯ ಎಂದು ಹೇಳಿತ್ತು. ಅರ್ಜಿದಾರರು ಗರ್ಭಪಾತದ ಗರಿಷ್ಠ ಮಿತಿಯನ್ನು 26 ವಾರಕ್ಕೆ ಏರಿಸಲು ಕೋರಿದ್ದರು.
ಈ ತಿದ್ದುಪಡಿ ಮಸೂದೆಯು ದೀರ್ಘಕಾಲದವರೆಗೂ ತಾವು ಗರ್ಭ ಧರಿಸಿರುವುದು ಅರಿಯದೆ ಬಳಿಕ ಅನಿವಾರ್ಯವಾಗಿ ಮಗುವಿಗೆ ಜನ್ಮನೀಡುವ ಸ್ಥಿತಿಗೆ ಒಳಗಾಗುವ ಅತ್ಯಾಚಾರ ಸಂತ್ರಸ್ತೆಯರು, ಅಂಕವೈಕಲ್ಯವುಳ್ಳ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರಿಗೆ ಈ ಮಿತಿ ವಿಸ್ತರಣೆ ನೆರವಾಗಲಿದೆ ಎಂದು ಜಾವಡೇಕರ್ ಹೇಳಿದರು.
( ಕೃಪೆ – ANI)
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…