Advertisement
MIRROR FOCUS

ಗರ್ಭಪಾತದ ಕಾಲಮಿತಿ ಏರಿಕೆ : ಮಹಿಳಾ ಆರೋಗ್ಯದ ಕಡೆಗೆ ಗಮನ

Share

ಗರ್ಭಪಾತಕ್ಕೆ ನೀಡಲಾಗಿದ್ದ ಗರಿಷ್ಠ ಅವಧಿಯ ಮಿತಿಯನ್ನು 20 ರಿಂದ 24 ವಾರಗಳಿಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮತಿ ನೀಡಿದೆ.

ಈ ಮೂಲಕ  ತಾಯ್ತನದ ಮರಣ ಪ್ರಮಾಣ ಕಡಿಮೆ ಮಾಡುವುದು, ಮಹಿಳೆಯರ ಹಕ್ಕು, ಗರ್ಭಪಾತಕ್ಕೆ ಅವಕಾಶ ನೀಡುವ ಗರಿಷ್ಠ ಅವಧಿಯ ಮಿತಿಯನ್ನು ಹೆಚ್ಚಿಸುವುದು ಗರ್ಭದ ಸುರಕ್ಷಿತ ನಿರ್ಮೂಲನೆಯನ್ನು ಖಾತರಿಪಡಿಸಲಿದೆ ಮತ್ತು ಮಹಿಳೆಯರಿಗೆ ತಮ್ಮ ದೇಹದಲ್ಲಿ ಸಂತಾನೋತ್ಪತ್ತಿಯ ಹಕ್ಕನ್ನು ನೀಡುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ವೈದ್ಯಕೀಯ ಗರ್ಭಪಾತ ಕಾಯ್ದೆ, 1971ಕ್ಕೆ ತಿದ್ದುಪಡಿ ತರುವ ವೈದ್ಯಕೀಯ ಗರ್ಭಪಾತ (ತಿದ್ದುಪಡಿ) ಮಸೂದೆ, 2020ಕ್ಕೆ ಸಂಪುಟ ಅನುಮೋದನೆ ನೀಡಿದೆ. ಈ ಮಸೂದೆಯನ್ನು ಮುಂಬರುವ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ.

ಗರ್ಭಪಾತಕ್ಕೆ 20 ವಾರಗಳ ಸಮಯ ಮಿತಿಯನ್ನು ನಿಗದಿಗೊಳಿಸಿರುವ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಕಳೆದ ಸಲ್ಲಿಸಲಾಗಿದ್ದ ಅರ್ಜಿಗೆ ಸೆಪ್ಟೆಂಬರ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದ ಸರ್ಕಾರ, ಗರ್ಭದಲ್ಲಿರುವ ಭ್ರೂಣದ ಜೀವ ರಕ್ಷಣೆ ನಾಗರಿಕರ ಪೋಷಕನಾದ ತನ್ನ ಕರ್ತವ್ಯ ಎಂದು ಹೇಳಿತ್ತು. ಅರ್ಜಿದಾರರು ಗರ್ಭಪಾತದ ಗರಿಷ್ಠ ಮಿತಿಯನ್ನು 26 ವಾರಕ್ಕೆ ಏರಿಸಲು ಕೋರಿದ್ದರು.

ಈ ತಿದ್ದುಪಡಿ ಮಸೂದೆಯು ದೀರ್ಘಕಾಲದವರೆಗೂ ತಾವು ಗರ್ಭ ಧರಿಸಿರುವುದು ಅರಿಯದೆ ಬಳಿಕ ಅನಿವಾರ್ಯವಾಗಿ ಮಗುವಿಗೆ ಜನ್ಮನೀಡುವ ಸ್ಥಿತಿಗೆ ಒಳಗಾಗುವ ಅತ್ಯಾಚಾರ ಸಂತ್ರಸ್ತೆಯರು, ಅಂಕವೈಕಲ್ಯವುಳ್ಳ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರಿಗೆ ಈ ಮಿತಿ ವಿಸ್ತರಣೆ ನೆರವಾಗಲಿದೆ ಎಂದು ಜಾವಡೇಕರ್ ಹೇಳಿದರು.

( ಕೃಪೆ – ANI)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

4 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

4 hours ago

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

11 hours ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

11 hours ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

11 hours ago