ಸುಳ್ಯ: ಗಾಂಧಿನಗರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯು ಇನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್.
ಶಾಲೆಯಲ್ಲಿ ಆರಂಭಗೊಂಡ ಆಂಗ್ಲಮಾಧ್ಯಮ ಎಲ್.ಕೆ.ಜಿ. ಮತ್ತು ಒಂದನೇ ತರಗತಿಯ ಉದ್ಘಾಟನೆಯನ್ನು ಶಾಸಕ ಎಸ್.ಅಂಗಾರ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ನ.ಪಂ. ಸದಸ್ಯರುಗಳಾದ ಶರೀಫ್ ಕಂಠಿ, ಪ್ರವೀತಾ ಪ್ರಶಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಬಿ.ಎಸ್, ಕಾಲೇಜು ಅಭಿವೃದ್ಧಿ ಸದಸ್ಯ ಹಾಗು ನ.ಪಂ.ಸದಸ್ಯ ಎಂ.ವೆಂಕಪ್ಪ ಗೌಡ, ಪ್ರೌಢಶಾಲಾ ಎಸ್ಡಿಎಂಸಿ ಕಾರ್ಯಾಧ್ಯಕ್ಷ ಪ್ರವೀಣ್ ನಾಯ್ಕ್, ಪ್ರಾಥಮಿಕ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಶಿವಕುಮಾರ್ ಆಚಾರ್ಯ, ಪದವಿಧರ ಮುಖ್ಯ ಶಿಕ್ಷಕ ಶೇರ ಕೋಟಿಯಪ್ಪ ಪೂಜಾರಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೆ.ಕೆ.ರೈ, ಉಪಾಧ್ಯಕ್ಷ ಆರ್.ಕೆ. ಮಹಮ್ಮದ್, ಸಿಆರ್ಪಿ ಗೋಪಾಲಕೃಷ್ಣ ಬನ, ದೈ.ಶಿ.ಶಿಕ್ಷಕಿ ಎ.ಜಿ. ಭವಾನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ.ಮಹಾಲಿಂಗ ಭಟ್ ಸ್ವಾಗತಿಸಿ, ಉಪಪ್ರಾಂಶುಪಾಲೆ ನಳಿನಿ ಧನ್ಯವಾದ ಸಮರ್ಪಿಸಿದರು. ಇದೇ ಸಂದರ್ಭದದಲ್ಲಿ ದಾನಿಗಳು ನೀಡಿದ ಪುಸ್ತಕ, ಬ್ಯಾಗ್,ಕೊಡೆ ಮತ್ತಿತರ ಪರಿಕರಗಳನ್ನು ಹಾಗೂ ದತ್ತಿನಿಧಿಯನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…