Advertisement
ಸುದ್ದಿಗಳು

ಗಾಂಧಿ ಚಿಂತನ ವೇದಿಕೆಯಿಂದ ಅ.2 ರಂದು ಗಾಂಧಿ ನಡಿಗೆ

Share

ಸುಳ್ಯ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 15೦ನೇ ಜನ್ಮದಿನವಾದ ಅಕ್ಟೋಬರ್ 2 ರಂದು ಸುಳ್ಯದ ಗಾಂಧಿ ಚಿಂತನ ವೇದಿಕೆಯ ವತಿಯಿಂದ ಬೆಳ್ಳಾರೆಯಿಂದ ಸುಳ್ಯದವರೆಗೆ ಗಾಂಧಿ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಸಂಚಾಲಕ ಹರೀಶ್ ಬಂಟ್ವಾಳ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಗಾಂಧಿ ಚಿಂತನೆಯ ಪ್ರಸರಣ ಕಾರ್ಯ ನಡೆಸಬೇಕೆಂಬ ಉದ್ದೇಶದಿಂದ ಬೆಳ್ಳಾರೆಯಿಂದ ಸುಳ್ಯದವರೆಗೆ 15ಕಿ.ಮೀ ನಡಿಗೆಯನ್ನು ಆಯೋಜಿಸಿದೆ.
ಯುವಜನ ಸಂಯುಕ್ತ ಮಂಡಳಿ ಸುಳ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.

Advertisement
Advertisement
Advertisement
Advertisement

ಅಕ್ಟೋಬರ್ 2 ರಂದು ಬೆಳಿಗ್ಗೆ 9 ಗಂಟೆಗೆ ಬೆಳ್ಳಾರೆಯಲ್ಲಿ ಗಾಂಧಿನಡಿಗೆಯ ಉದ್ಘಾಟನೆ ನಡೆಯಲಿದೆ. ಬಳಿಕ ನಡಿಗೆ ಸಾಗಿ ಬರುವ ಕಡೆಗಳಲ್ಲಿ ನಾಟಕ ಪ್ರದರ್ಶನ, ಭಜನೆ, ದೇಶಭಕ್ತಿಗೀತೆ, ಮೊದಲಾದವುಗಳ ಜೊತೆಗೆ ಕಿರುಸಭಾ ಕಾರ್ಯಕ್ರಮಗಳು ನಡೆಯಲಿದೆ. ಅಪರಾಹ್ನ 3 ಗಂಟೆಗೆ ಸುಳ್ಯಕ್ಕೆ ತಲುಪುವ ನಡಿಗೆ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆಯವರು ಹಮ್ಮಿಕೊಳ್ಳುವ ಗಾಂಧಿಜಯಂತಿಯೊಂದಿಗೆ ಸೇರಿಕೊಂಡು ಗಾಂಧಿ ಚಿಂತನಾ ಉಪನ್ಯಾಸದೊಂದಿಗೆ ಸಮಾರೋಪಗೊಳ್ಳಲಿದೆ.

Advertisement

ಗಾಂಧಿ ನಡಿಗೆಯಲ್ಲಿ 150 ಮಂದಿ ಪೂರ್ಣವಾಗಿ ಭಾಗವಹಿಸುತ್ತಾರೆ. ಈ 150 ಮಂದಿಗೆ ಗಾಂಧಿ ಚಿಂತನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಸೆಪ್ಟಂಬರ್ 29ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಗಾಂಧಿ ಚಿಂತನ ವೇದಿಕೆಯ ಸಂಚಾಲಕರುಗಳಾದ ಡಾ.ಸುಂದರ ಕೇನಾಜೆ, ದಿನೇಶ್ ಮಡಪ್ಪಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಉಷಾ ಕಲ್ಯಾಣಿ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ ಪೆರಾಜೆ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

5 mins ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

23 mins ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

14 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

14 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

14 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

22 hours ago