Advertisement
ಸುದ್ದಿಗಳು

ಗಾಂಧಿ ಚಿಂತನ ವೇದಿಕೆಯಿಂದ ಅ.2 ರಂದು ಗಾಂಧಿ ನಡಿಗೆ

Share

ಸುಳ್ಯ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 15೦ನೇ ಜನ್ಮದಿನವಾದ ಅಕ್ಟೋಬರ್ 2 ರಂದು ಸುಳ್ಯದ ಗಾಂಧಿ ಚಿಂತನ ವೇದಿಕೆಯ ವತಿಯಿಂದ ಬೆಳ್ಳಾರೆಯಿಂದ ಸುಳ್ಯದವರೆಗೆ ಗಾಂಧಿ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಸಂಚಾಲಕ ಹರೀಶ್ ಬಂಟ್ವಾಳ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಗಾಂಧಿ ಚಿಂತನೆಯ ಪ್ರಸರಣ ಕಾರ್ಯ ನಡೆಸಬೇಕೆಂಬ ಉದ್ದೇಶದಿಂದ ಬೆಳ್ಳಾರೆಯಿಂದ ಸುಳ್ಯದವರೆಗೆ 15ಕಿ.ಮೀ ನಡಿಗೆಯನ್ನು ಆಯೋಜಿಸಿದೆ.
ಯುವಜನ ಸಂಯುಕ್ತ ಮಂಡಳಿ ಸುಳ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.

Advertisement
Advertisement

ಅಕ್ಟೋಬರ್ 2 ರಂದು ಬೆಳಿಗ್ಗೆ 9 ಗಂಟೆಗೆ ಬೆಳ್ಳಾರೆಯಲ್ಲಿ ಗಾಂಧಿನಡಿಗೆಯ ಉದ್ಘಾಟನೆ ನಡೆಯಲಿದೆ. ಬಳಿಕ ನಡಿಗೆ ಸಾಗಿ ಬರುವ ಕಡೆಗಳಲ್ಲಿ ನಾಟಕ ಪ್ರದರ್ಶನ, ಭಜನೆ, ದೇಶಭಕ್ತಿಗೀತೆ, ಮೊದಲಾದವುಗಳ ಜೊತೆಗೆ ಕಿರುಸಭಾ ಕಾರ್ಯಕ್ರಮಗಳು ನಡೆಯಲಿದೆ. ಅಪರಾಹ್ನ 3 ಗಂಟೆಗೆ ಸುಳ್ಯಕ್ಕೆ ತಲುಪುವ ನಡಿಗೆ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆಯವರು ಹಮ್ಮಿಕೊಳ್ಳುವ ಗಾಂಧಿಜಯಂತಿಯೊಂದಿಗೆ ಸೇರಿಕೊಂಡು ಗಾಂಧಿ ಚಿಂತನಾ ಉಪನ್ಯಾಸದೊಂದಿಗೆ ಸಮಾರೋಪಗೊಳ್ಳಲಿದೆ.

ಗಾಂಧಿ ನಡಿಗೆಯಲ್ಲಿ 150 ಮಂದಿ ಪೂರ್ಣವಾಗಿ ಭಾಗವಹಿಸುತ್ತಾರೆ. ಈ 150 ಮಂದಿಗೆ ಗಾಂಧಿ ಚಿಂತನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಸೆಪ್ಟಂಬರ್ 29ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಗಾಂಧಿ ಚಿಂತನ ವೇದಿಕೆಯ ಸಂಚಾಲಕರುಗಳಾದ ಡಾ.ಸುಂದರ ಕೇನಾಜೆ, ದಿನೇಶ್ ಮಡಪ್ಪಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಉಷಾ ಕಲ್ಯಾಣಿ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ ಪೆರಾಜೆ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

4 minutes ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

12 minutes ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

31 minutes ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

36 minutes ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

42 minutes ago

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

23 hours ago