Advertisement
ಸುದ್ದಿಗಳು

ಗಾಂಧಿ ನಡಿಗೆಗೆ ಪೂರ್ವಭಾವಿಯಾಗಿ ಗಾಂಧಿ ಚಿಂತನ ಮಾಹಿತಿ ಕಾರ್ಯಾಗಾರ

Share

ಸುಳ್ಯ: ಗಾಂಧಿ ಚಿಂತನ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ಬೆಳ್ಳಾರೆಯಿಂದ ಸುಳ್ಯದವರೆಗೆ ಅ. 2ರಂದು ನಡೆಯಲಿರುವ ಗಾಂಧಿ ನಡಿಗೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಗಾಂಧಿ ಚಿಂತನ ಮಾಹಿತಿ ಕಾರ್ಯಾಗಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯ ಸಭಾಭವನದಲ್ಲಿ ನಡೆಯಿತು.

Advertisement
Advertisement
Advertisement
Advertisement

ಮೈಸೂರಿನ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರದ ಹಿರಿಯ ಸಂಶೋಧಕ ಡಾ. ಚಲಪತಿ ಆರ್, ಮೈಸೂರಿನ ಅರಿವು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಆಡಳಿತ ಮುಖ್ಯಸ್ಥ ಡಾ. ಎಂ. ಸಿ. ಮನೋಹರ್, ಗಾಂಧಿ ಚಿಂತನ ವೇದಿಕೆಯ ಸಂಚಾಲಕ ಡಾ. ಸುಂದರ್ ಕೇನಾಜೆ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಿದರು.
ಮಹಾತ್ಮಾ ಗಾಂಧೀಜಿಯವರ ಸತ್ಯಾಗ್ರಹ, ಸರಳತೆ, ಸಹಕಾರಿ ತತ್ವ, ಸ್ವಾವಲಂಬನೆ, ಧರ್ಮದರ್ಶಿತ್ವ, ವಿಕೇಂದ್ರೀಕರಣ, ಅಧಿಕಾರ, ಆಧ್ಯಾತ್ಮ ವಿಷಯಗಳ ಬಗ್ಗೆ ವಿಚಾರ ಮಂಡಿಸಿದರು.

Advertisement

 

ಉದ್ಘಾಟನೆ: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹರಪ್ರಸಾದ್ ತುದಿಯಡ್ಕ ಹಾಗು ಪತ್ರಕರ್ತ ಡಾ.ಯು. ಪಿ. ಶಿವಾನಂದ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

Advertisement

ಡಾ. ಹರಪ್ರಸಾದ್ ತುದಿಯಡ್ಕ ಮಾತನಾಡಿ ಇಂದಿನ ಕಾಲಘಟ್ಟದಲ್ಲಿ ಗಾಂಧಿ ಕುರಿತ ಓದು ಮತ್ತು ಅಧ್ಯಯನ ವ್ಯಾಪಕವಾಗಬೇಕು. ದೇಶದ ಚಿಂತನೆ ಹಚ್ಚುವ ನಾಯಕರು ಮಹಾತ್ಮರಾಗುತ್ತಾರೆ ಎನ್ನುವುದಕ್ಕೆ ಗಾಂಧೀಜಿಯೇ ಉತ್ತಮ ಉದಾಹರಣೆ ಎಂದು ಹೇಳಿದರು.

ಡಾ.ಯು. ಪಿ. ಶಿವಾನಂದ ಮಾತನಾಡಿ ಕತ್ತಲಿನಿಂದ ಬೆಳಕಿನೆಡೆಗೆ, ಅಸತ್ಯದಿಂದ ಸತ್ಯದೆಡೆಗೆ ಎನ್ನುವ ಮೌಲ್ಯಗಳನ್ನು ಬಲವಾಗಿ ಪ್ರತಿಪಾದಿಸಿದ ಮತ್ತು ಅದರಂತೆ ಬದುಕಿದ ಗಾಂಧೀಜಿಯವರ ಚಿಂತನೆ ಸಾರ್ವಕಾಲಿಕ ಪ್ರಸ್ತುತತೆ ಇರುವಂತದ್ದು ಎಂದು ಅಭಿಪ್ರಾಯಪಟ್ಟರು.

Advertisement

ಗಾಂಧಿ ಚಿಂತನಾ ವೇದಿಕೆಯ ಸಂಚಾಲಕ ಹರೀಶ್ ಬಂಟ್ವಾಳ್ ಸ್ವಾಗತಿಸಿ ಪ್ರಸ್ತಾವನೆಗೈದರು‌. ಡಾ.ಎಂ.ಸಿ ಮನೋಹರ್, ಡಾ. ಛಲಪತಿ ಆರ್, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆ, ಗಾಂಧಿನಡಿಗೆ ಕಾರ್ಯಕ್ರಮದ ಸಂಚಾಲಕರಾದ ಡಾ. ಸುಂದರ್ ಕೇನಾಜೆ, ದಿನೇಶ್ ಮಡಪ್ಪಾಡಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

7 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

8 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

9 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

18 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

18 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

18 hours ago