Advertisement
ಸುದ್ದಿಗಳು

ಗಾಂಧಿ ನಡಿಗೆಗೆ ಪೂರ್ವಭಾವಿಯಾಗಿ ಗಾಂಧಿ ಚಿಂತನ ಮಾಹಿತಿ ಕಾರ್ಯಾಗಾರ

Share

ಸುಳ್ಯ: ಗಾಂಧಿ ಚಿಂತನ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ಬೆಳ್ಳಾರೆಯಿಂದ ಸುಳ್ಯದವರೆಗೆ ಅ. 2ರಂದು ನಡೆಯಲಿರುವ ಗಾಂಧಿ ನಡಿಗೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಗಾಂಧಿ ಚಿಂತನ ಮಾಹಿತಿ ಕಾರ್ಯಾಗಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯ ಸಭಾಭವನದಲ್ಲಿ ನಡೆಯಿತು.

ಮೈಸೂರಿನ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರದ ಹಿರಿಯ ಸಂಶೋಧಕ ಡಾ. ಚಲಪತಿ ಆರ್, ಮೈಸೂರಿನ ಅರಿವು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಆಡಳಿತ ಮುಖ್ಯಸ್ಥ ಡಾ. ಎಂ. ಸಿ. ಮನೋಹರ್, ಗಾಂಧಿ ಚಿಂತನ ವೇದಿಕೆಯ ಸಂಚಾಲಕ ಡಾ. ಸುಂದರ್ ಕೇನಾಜೆ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಿದರು.
ಮಹಾತ್ಮಾ ಗಾಂಧೀಜಿಯವರ ಸತ್ಯಾಗ್ರಹ, ಸರಳತೆ, ಸಹಕಾರಿ ತತ್ವ, ಸ್ವಾವಲಂಬನೆ, ಧರ್ಮದರ್ಶಿತ್ವ, ವಿಕೇಂದ್ರೀಕರಣ, ಅಧಿಕಾರ, ಆಧ್ಯಾತ್ಮ ವಿಷಯಗಳ ಬಗ್ಗೆ ವಿಚಾರ ಮಂಡಿಸಿದರು.

Advertisement

 

ಉದ್ಘಾಟನೆ: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹರಪ್ರಸಾದ್ ತುದಿಯಡ್ಕ ಹಾಗು ಪತ್ರಕರ್ತ ಡಾ.ಯು. ಪಿ. ಶಿವಾನಂದ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

Advertisement

ಡಾ. ಹರಪ್ರಸಾದ್ ತುದಿಯಡ್ಕ ಮಾತನಾಡಿ ಇಂದಿನ ಕಾಲಘಟ್ಟದಲ್ಲಿ ಗಾಂಧಿ ಕುರಿತ ಓದು ಮತ್ತು ಅಧ್ಯಯನ ವ್ಯಾಪಕವಾಗಬೇಕು. ದೇಶದ ಚಿಂತನೆ ಹಚ್ಚುವ ನಾಯಕರು ಮಹಾತ್ಮರಾಗುತ್ತಾರೆ ಎನ್ನುವುದಕ್ಕೆ ಗಾಂಧೀಜಿಯೇ ಉತ್ತಮ ಉದಾಹರಣೆ ಎಂದು ಹೇಳಿದರು.

ಡಾ.ಯು. ಪಿ. ಶಿವಾನಂದ ಮಾತನಾಡಿ ಕತ್ತಲಿನಿಂದ ಬೆಳಕಿನೆಡೆಗೆ, ಅಸತ್ಯದಿಂದ ಸತ್ಯದೆಡೆಗೆ ಎನ್ನುವ ಮೌಲ್ಯಗಳನ್ನು ಬಲವಾಗಿ ಪ್ರತಿಪಾದಿಸಿದ ಮತ್ತು ಅದರಂತೆ ಬದುಕಿದ ಗಾಂಧೀಜಿಯವರ ಚಿಂತನೆ ಸಾರ್ವಕಾಲಿಕ ಪ್ರಸ್ತುತತೆ ಇರುವಂತದ್ದು ಎಂದು ಅಭಿಪ್ರಾಯಪಟ್ಟರು.

Advertisement

ಗಾಂಧಿ ಚಿಂತನಾ ವೇದಿಕೆಯ ಸಂಚಾಲಕ ಹರೀಶ್ ಬಂಟ್ವಾಳ್ ಸ್ವಾಗತಿಸಿ ಪ್ರಸ್ತಾವನೆಗೈದರು‌. ಡಾ.ಎಂ.ಸಿ ಮನೋಹರ್, ಡಾ. ಛಲಪತಿ ಆರ್, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆ, ಗಾಂಧಿನಡಿಗೆ ಕಾರ್ಯಕ್ರಮದ ಸಂಚಾಲಕರಾದ ಡಾ. ಸುಂದರ್ ಕೇನಾಜೆ, ದಿನೇಶ್ ಮಡಪ್ಪಾಡಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

50 minutes ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago