Advertisement
ಸುದ್ದಿಗಳು

ಗಾಂಧಿ ನಡಿಗೆಗೆ ಪೂರ್ವಭಾವಿಯಾಗಿ ಗಾಂಧಿ ಚಿಂತನ ಮಾಹಿತಿ ಕಾರ್ಯಾಗಾರ

Share

ಸುಳ್ಯ: ಗಾಂಧಿ ಚಿಂತನ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ಬೆಳ್ಳಾರೆಯಿಂದ ಸುಳ್ಯದವರೆಗೆ ಅ. 2ರಂದು ನಡೆಯಲಿರುವ ಗಾಂಧಿ ನಡಿಗೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಗಾಂಧಿ ಚಿಂತನ ಮಾಹಿತಿ ಕಾರ್ಯಾಗಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯ ಸಭಾಭವನದಲ್ಲಿ ನಡೆಯಿತು.

ಮೈಸೂರಿನ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರದ ಹಿರಿಯ ಸಂಶೋಧಕ ಡಾ. ಚಲಪತಿ ಆರ್, ಮೈಸೂರಿನ ಅರಿವು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಆಡಳಿತ ಮುಖ್ಯಸ್ಥ ಡಾ. ಎಂ. ಸಿ. ಮನೋಹರ್, ಗಾಂಧಿ ಚಿಂತನ ವೇದಿಕೆಯ ಸಂಚಾಲಕ ಡಾ. ಸುಂದರ್ ಕೇನಾಜೆ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಿದರು.
ಮಹಾತ್ಮಾ ಗಾಂಧೀಜಿಯವರ ಸತ್ಯಾಗ್ರಹ, ಸರಳತೆ, ಸಹಕಾರಿ ತತ್ವ, ಸ್ವಾವಲಂಬನೆ, ಧರ್ಮದರ್ಶಿತ್ವ, ವಿಕೇಂದ್ರೀಕರಣ, ಅಧಿಕಾರ, ಆಧ್ಯಾತ್ಮ ವಿಷಯಗಳ ಬಗ್ಗೆ ವಿಚಾರ ಮಂಡಿಸಿದರು.

 

ಉದ್ಘಾಟನೆ: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹರಪ್ರಸಾದ್ ತುದಿಯಡ್ಕ ಹಾಗು ಪತ್ರಕರ್ತ ಡಾ.ಯು. ಪಿ. ಶಿವಾನಂದ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಡಾ. ಹರಪ್ರಸಾದ್ ತುದಿಯಡ್ಕ ಮಾತನಾಡಿ ಇಂದಿನ ಕಾಲಘಟ್ಟದಲ್ಲಿ ಗಾಂಧಿ ಕುರಿತ ಓದು ಮತ್ತು ಅಧ್ಯಯನ ವ್ಯಾಪಕವಾಗಬೇಕು. ದೇಶದ ಚಿಂತನೆ ಹಚ್ಚುವ ನಾಯಕರು ಮಹಾತ್ಮರಾಗುತ್ತಾರೆ ಎನ್ನುವುದಕ್ಕೆ ಗಾಂಧೀಜಿಯೇ ಉತ್ತಮ ಉದಾಹರಣೆ ಎಂದು ಹೇಳಿದರು.

ಡಾ.ಯು. ಪಿ. ಶಿವಾನಂದ ಮಾತನಾಡಿ ಕತ್ತಲಿನಿಂದ ಬೆಳಕಿನೆಡೆಗೆ, ಅಸತ್ಯದಿಂದ ಸತ್ಯದೆಡೆಗೆ ಎನ್ನುವ ಮೌಲ್ಯಗಳನ್ನು ಬಲವಾಗಿ ಪ್ರತಿಪಾದಿಸಿದ ಮತ್ತು ಅದರಂತೆ ಬದುಕಿದ ಗಾಂಧೀಜಿಯವರ ಚಿಂತನೆ ಸಾರ್ವಕಾಲಿಕ ಪ್ರಸ್ತುತತೆ ಇರುವಂತದ್ದು ಎಂದು ಅಭಿಪ್ರಾಯಪಟ್ಟರು.

ಗಾಂಧಿ ಚಿಂತನಾ ವೇದಿಕೆಯ ಸಂಚಾಲಕ ಹರೀಶ್ ಬಂಟ್ವಾಳ್ ಸ್ವಾಗತಿಸಿ ಪ್ರಸ್ತಾವನೆಗೈದರು‌. ಡಾ.ಎಂ.ಸಿ ಮನೋಹರ್, ಡಾ. ಛಲಪತಿ ಆರ್, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆ, ಗಾಂಧಿನಡಿಗೆ ಕಾರ್ಯಕ್ರಮದ ಸಂಚಾಲಕರಾದ ಡಾ. ಸುಂದರ್ ಕೇನಾಜೆ, ದಿನೇಶ್ ಮಡಪ್ಪಾಡಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

56 minutes ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

8 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

9 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

10 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

11 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

23 hours ago