Advertisement
ಸುದ್ದಿಗಳು

ಗಾಂಧೀಜಿಯ ಆರ್ಥಿಕತೆ ಅನುಷ್ಠಾನವಾಗದ ಕಾರಣ ನಿರುದ್ಯೋಗ ಸಮಸ್ಯೆ- ಡಾ.ಪ್ರಭಾಕರ ಶಿಶಿಲ

Share

ಸುಳ್ಯ: ಹಿಂದೆಂದಿಗಿಂತಲೂ ಮಹಾತ್ಮಾ ಗಾಂಧೀಜಿಯವರ ಚಿಂತನೆ ಇಂದು ಪ್ರಸ್ತುತವಾಗಿದೆ. ಮಹಾತ್ಮಾ ಗಾಂಧೀಜಿಯವರ ಆರ್ಥಿಕ ಚಿಂತನೆ ಅನುಷ್ಠಾನವಾಗದ ಕಾರಣ ದೇಶದಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ಹಿನ್ನಡೆ ಉಂಟಾಗುತ್ತಿದೆ, ನಿರುದ್ಯೋಗ ಸಮಸ್ಯೆ ಉಲ್ಬಣಿಸಿದೆ ಎಂದು ಆರ್ಥಿಕ ತಜ್ಞ, ಸಾಹಿತಿ ಡಾ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟಿದ್ದಾರೆ.

ಸುಳ್ಯದ ಗಾಂಧಿ ಚಿಂತನ ವೇದಿಕೆಯ ನೇತೃತ್ವದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವಾದ ಗುರುವಾರ ಯುವಜನ ಸಂಯುಕ್ತ ಮಂಡಳಿ ಸಮೀಪದ ಮೈದಾನದಲ್ಲಿ ನಡೆದ ಸದ್ಭಾವನಾ ಉಪವಾಸ ಮತ್ತು ಗಾಂಧಿ ಸ್ಮರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಣ್ಣ ಮತ್ತು ಗುಡಿ ಕೈಗಾರಿಕೆಗಳ ಮೂಲಕ ಪ್ರತಿಯೊಬ್ಬರೂ ಉತ್ಪಾದಕರಾಗಬೇಕು ಎಂಬ ತತ್ವವನ್ನು ಗಾಂಧೀಜಿ ಬೋಧಿಸಿದ್ದರು. ಆದರೆ ನಾವು ಬೃಹತ್ ಕೈಗಾರಿಕೆಗಳಿಗೆ ಒತ್ತು ನೀಡಿದ ಕಾರಣ ಸಣ್ಣ ಮತ್ತು ಗುಡಿ ಕೈಗಾರಿಕೆಗಳು ನಿಂತು ಹೋಗಲು ಕಾರಣವಾಯಿತು. ಇದರಿಂದ ಆರ್ಥಿಕ ಹಿನ್ನಡೆ, ನಿರುದ್ಯೋಗ ಸಮಸ್ಯೆ ಉಂಟಾಗಿದೆ ಎಂದು ಅವರು ಹೇಳಿದರು. ಗಾಂಧೀಜಿಯವರು 20ನೇ ಶತಮಾನದ ಅತೀ ದೊಡ್ಡ ಸಂತ ಎಂದು ಜಗತ್ತೇ ಒಪ್ಪಿಕೊಂಡಿದೆ. ಉಪವಾಸ, ಅಹಿಂಸೆಯ ಮೂಲಕ ಅವರು ಇಡೀ ಜಗತ್ತನ್ನೇ ಗೆದ್ದುಕೊಂಡಿದ್ದರು. ಉಪವಾಸದಿಂದ ಸಂಯಮ ಗಳಿಸಲು ಸಾಧ್ಯ. ಸಂಯಮ ಇದ್ದರೆ ಏನನ್ನು ಬೇಕಾದರು ಸಾಧಿಸಬಹುದು ಎಂದು ಡಾ.ಶಿಶಿಲ ಹೇಳಿದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ, ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಸುಳ್ಯ ಎಸ್‍ಐ ಎಂ.ಆರ್.ಹರೀಶ್, ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಮಾತನಾಡಿದರು. ಪತ್ರಕರ್ತ ಡಾ.ಯು.ಪಿ.ಶಿವಾನಂದ ಅಧ್ಯಕ್ಷತೆ ವಹಿಸಿದ್ದರು. ಗಾಂಧಿ ಚಿಂತನ ವೇದಿಕೆಯ ಸಂಚಾಲಕರಾದ ಹರೀಶ್ ಬಂಟ್ವಾಳ್, ದಿನೇಶ್ ಮಡಪ್ಪಾಡಿ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆ, ಉಪನ್ಯಾಸಕ ಸಂಜೀವ ಕುದ್ಪಾಜೆ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಸದ್ಭಾವನಾ ಉಪವಾಸ, ಸರ್ವಧರ್ಮ ಪ್ರಾರ್ಥನೆ, ಮೀರಾ ಭಜನ್, ಗಾಂಧೀಜಿ ಕುರಿತು ಉಪನ್ಯಾಸ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

2 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

3 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

5 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

10 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

10 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

21 hours ago