ಸುದ್ದಿಗಳು

ಗಾಂಧೀಜಿಯ ಆರ್ಥಿಕತೆ ಅನುಷ್ಠಾನವಾಗದ ಕಾರಣ ನಿರುದ್ಯೋಗ ಸಮಸ್ಯೆ- ಡಾ.ಪ್ರಭಾಕರ ಶಿಶಿಲ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಹಿಂದೆಂದಿಗಿಂತಲೂ ಮಹಾತ್ಮಾ ಗಾಂಧೀಜಿಯವರ ಚಿಂತನೆ ಇಂದು ಪ್ರಸ್ತುತವಾಗಿದೆ. ಮಹಾತ್ಮಾ ಗಾಂಧೀಜಿಯವರ ಆರ್ಥಿಕ ಚಿಂತನೆ ಅನುಷ್ಠಾನವಾಗದ ಕಾರಣ ದೇಶದಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ಹಿನ್ನಡೆ ಉಂಟಾಗುತ್ತಿದೆ, ನಿರುದ್ಯೋಗ ಸಮಸ್ಯೆ ಉಲ್ಬಣಿಸಿದೆ ಎಂದು ಆರ್ಥಿಕ ತಜ್ಞ, ಸಾಹಿತಿ ಡಾ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟಿದ್ದಾರೆ.

Advertisement

ಸುಳ್ಯದ ಗಾಂಧಿ ಚಿಂತನ ವೇದಿಕೆಯ ನೇತೃತ್ವದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವಾದ ಗುರುವಾರ ಯುವಜನ ಸಂಯುಕ್ತ ಮಂಡಳಿ ಸಮೀಪದ ಮೈದಾನದಲ್ಲಿ ನಡೆದ ಸದ್ಭಾವನಾ ಉಪವಾಸ ಮತ್ತು ಗಾಂಧಿ ಸ್ಮರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಣ್ಣ ಮತ್ತು ಗುಡಿ ಕೈಗಾರಿಕೆಗಳ ಮೂಲಕ ಪ್ರತಿಯೊಬ್ಬರೂ ಉತ್ಪಾದಕರಾಗಬೇಕು ಎಂಬ ತತ್ವವನ್ನು ಗಾಂಧೀಜಿ ಬೋಧಿಸಿದ್ದರು. ಆದರೆ ನಾವು ಬೃಹತ್ ಕೈಗಾರಿಕೆಗಳಿಗೆ ಒತ್ತು ನೀಡಿದ ಕಾರಣ ಸಣ್ಣ ಮತ್ತು ಗುಡಿ ಕೈಗಾರಿಕೆಗಳು ನಿಂತು ಹೋಗಲು ಕಾರಣವಾಯಿತು. ಇದರಿಂದ ಆರ್ಥಿಕ ಹಿನ್ನಡೆ, ನಿರುದ್ಯೋಗ ಸಮಸ್ಯೆ ಉಂಟಾಗಿದೆ ಎಂದು ಅವರು ಹೇಳಿದರು. ಗಾಂಧೀಜಿಯವರು 20ನೇ ಶತಮಾನದ ಅತೀ ದೊಡ್ಡ ಸಂತ ಎಂದು ಜಗತ್ತೇ ಒಪ್ಪಿಕೊಂಡಿದೆ. ಉಪವಾಸ, ಅಹಿಂಸೆಯ ಮೂಲಕ ಅವರು ಇಡೀ ಜಗತ್ತನ್ನೇ ಗೆದ್ದುಕೊಂಡಿದ್ದರು. ಉಪವಾಸದಿಂದ ಸಂಯಮ ಗಳಿಸಲು ಸಾಧ್ಯ. ಸಂಯಮ ಇದ್ದರೆ ಏನನ್ನು ಬೇಕಾದರು ಸಾಧಿಸಬಹುದು ಎಂದು ಡಾ.ಶಿಶಿಲ ಹೇಳಿದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ, ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಸುಳ್ಯ ಎಸ್‍ಐ ಎಂ.ಆರ್.ಹರೀಶ್, ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಮಾತನಾಡಿದರು. ಪತ್ರಕರ್ತ ಡಾ.ಯು.ಪಿ.ಶಿವಾನಂದ ಅಧ್ಯಕ್ಷತೆ ವಹಿಸಿದ್ದರು. ಗಾಂಧಿ ಚಿಂತನ ವೇದಿಕೆಯ ಸಂಚಾಲಕರಾದ ಹರೀಶ್ ಬಂಟ್ವಾಳ್, ದಿನೇಶ್ ಮಡಪ್ಪಾಡಿ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆ, ಉಪನ್ಯಾಸಕ ಸಂಜೀವ ಕುದ್ಪಾಜೆ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಸದ್ಭಾವನಾ ಉಪವಾಸ, ಸರ್ವಧರ್ಮ ಪ್ರಾರ್ಥನೆ, ಮೀರಾ ಭಜನ್, ಗಾಂಧೀಜಿ ಕುರಿತು ಉಪನ್ಯಾಸ ನಡೆಯಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

2 hours ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

5 hours ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

18 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

18 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago