Advertisement
ಸುದ್ದಿಗಳು

ಗಾಂಧೀಜಿಯ ಆರ್ಥಿಕತೆ ಅನುಷ್ಠಾನವಾಗದ ಕಾರಣ ನಿರುದ್ಯೋಗ ಸಮಸ್ಯೆ- ಡಾ.ಪ್ರಭಾಕರ ಶಿಶಿಲ

Share

ಸುಳ್ಯ: ಹಿಂದೆಂದಿಗಿಂತಲೂ ಮಹಾತ್ಮಾ ಗಾಂಧೀಜಿಯವರ ಚಿಂತನೆ ಇಂದು ಪ್ರಸ್ತುತವಾಗಿದೆ. ಮಹಾತ್ಮಾ ಗಾಂಧೀಜಿಯವರ ಆರ್ಥಿಕ ಚಿಂತನೆ ಅನುಷ್ಠಾನವಾಗದ ಕಾರಣ ದೇಶದಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ಹಿನ್ನಡೆ ಉಂಟಾಗುತ್ತಿದೆ, ನಿರುದ್ಯೋಗ ಸಮಸ್ಯೆ ಉಲ್ಬಣಿಸಿದೆ ಎಂದು ಆರ್ಥಿಕ ತಜ್ಞ, ಸಾಹಿತಿ ಡಾ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟಿದ್ದಾರೆ.

ಸುಳ್ಯದ ಗಾಂಧಿ ಚಿಂತನ ವೇದಿಕೆಯ ನೇತೃತ್ವದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವಾದ ಗುರುವಾರ ಯುವಜನ ಸಂಯುಕ್ತ ಮಂಡಳಿ ಸಮೀಪದ ಮೈದಾನದಲ್ಲಿ ನಡೆದ ಸದ್ಭಾವನಾ ಉಪವಾಸ ಮತ್ತು ಗಾಂಧಿ ಸ್ಮರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಣ್ಣ ಮತ್ತು ಗುಡಿ ಕೈಗಾರಿಕೆಗಳ ಮೂಲಕ ಪ್ರತಿಯೊಬ್ಬರೂ ಉತ್ಪಾದಕರಾಗಬೇಕು ಎಂಬ ತತ್ವವನ್ನು ಗಾಂಧೀಜಿ ಬೋಧಿಸಿದ್ದರು. ಆದರೆ ನಾವು ಬೃಹತ್ ಕೈಗಾರಿಕೆಗಳಿಗೆ ಒತ್ತು ನೀಡಿದ ಕಾರಣ ಸಣ್ಣ ಮತ್ತು ಗುಡಿ ಕೈಗಾರಿಕೆಗಳು ನಿಂತು ಹೋಗಲು ಕಾರಣವಾಯಿತು. ಇದರಿಂದ ಆರ್ಥಿಕ ಹಿನ್ನಡೆ, ನಿರುದ್ಯೋಗ ಸಮಸ್ಯೆ ಉಂಟಾಗಿದೆ ಎಂದು ಅವರು ಹೇಳಿದರು. ಗಾಂಧೀಜಿಯವರು 20ನೇ ಶತಮಾನದ ಅತೀ ದೊಡ್ಡ ಸಂತ ಎಂದು ಜಗತ್ತೇ ಒಪ್ಪಿಕೊಂಡಿದೆ. ಉಪವಾಸ, ಅಹಿಂಸೆಯ ಮೂಲಕ ಅವರು ಇಡೀ ಜಗತ್ತನ್ನೇ ಗೆದ್ದುಕೊಂಡಿದ್ದರು. ಉಪವಾಸದಿಂದ ಸಂಯಮ ಗಳಿಸಲು ಸಾಧ್ಯ. ಸಂಯಮ ಇದ್ದರೆ ಏನನ್ನು ಬೇಕಾದರು ಸಾಧಿಸಬಹುದು ಎಂದು ಡಾ.ಶಿಶಿಲ ಹೇಳಿದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ, ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಸುಳ್ಯ ಎಸ್‍ಐ ಎಂ.ಆರ್.ಹರೀಶ್, ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಮಾತನಾಡಿದರು. ಪತ್ರಕರ್ತ ಡಾ.ಯು.ಪಿ.ಶಿವಾನಂದ ಅಧ್ಯಕ್ಷತೆ ವಹಿಸಿದ್ದರು. ಗಾಂಧಿ ಚಿಂತನ ವೇದಿಕೆಯ ಸಂಚಾಲಕರಾದ ಹರೀಶ್ ಬಂಟ್ವಾಳ್, ದಿನೇಶ್ ಮಡಪ್ಪಾಡಿ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆ, ಉಪನ್ಯಾಸಕ ಸಂಜೀವ ಕುದ್ಪಾಜೆ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಸದ್ಭಾವನಾ ಉಪವಾಸ, ಸರ್ವಧರ್ಮ ಪ್ರಾರ್ಥನೆ, ಮೀರಾ ಭಜನ್, ಗಾಂಧೀಜಿ ಕುರಿತು ಉಪನ್ಯಾಸ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

7 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

8 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago