ಗಾಂಧೀಜಿ ಎಲ್ಲರ ಆತ್ಮದ ಸೊತ್ತು- ಮೋಹನ್ ಸೋನ

October 2, 2019
5:42 PM

ಸುಳ್ಯ: ಮಹಾತ್ಮಾ ಗಾಂಧೀಜಿಯವರು ಎಲ್ಲರ ಆತ್ಮದ ಸೊತ್ತು. ಗಾಂಧೀಜಿಯ ಮನಸ್ಸು ಎಲ್ಲೆಡೆ ಕೆಲಸ ಮಾಡ್ತಾ ಇದೆ. ಪ್ರತಿಯೊಬ್ಬರ ಮನಸ್ಸಿನಲ್ಲಿ ಗಾಂಧೀಜಿ ನೆಲೆಯಾಗಬೇಕು. ಆ ಮೂಲಕ ಗಾಂಧೀಜಿಯ ಕಲ್ಪನೆಯ ನಾಡು ಸಾಕಾರಗೊಳ್ಳಬೇಕು ಎಂದು ಕಲಾವಿದ, ನಾಟಕಕಾರ ಮೋಹನ್ ಸೋನ ಹೇಳಿದ್ದಾರೆ.

ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಗಾಂಧಿ ಚಿಂತನ ವೇದಿಕೆಯ ವತಿಯಿಂದ ಬೆಳ್ಳಾರೆಯಿಂದ ಸುಳ್ಯಕ್ಕೆ ನಡೆದ ಗಾಂಧಿ ನಡಿಗೆ ಕಾರ್ಯಕ್ರಮಕ್ಕೆ ಸೋಣಂಗೇರಿಯಲ್ಲಿ ನೀಡಿದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ.ಸುಗುಣ ಗೌಡ, ರುಕ್ಮಯ್ಯ ಗೌಡ, ಬಾಲಕೃಷ್ಣ ಆಳ್ವ, ಮೋಂಟಡ್ಕ ರಾಘವ ಗೌಡ, ದೇರ್ಲ ನಾರಾಯಣ ರೈ, ಕೃಷ್ಣ ಸ್ವಾಮಿ ಕುಕ್ಕಂದೂರು, ಪುಟ್ಟ ಅಜಕ್ಕಳಮನೆ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ನ.ಪಂ.ಮುಖ್ಯಾಧಿಕಾರಿ ಎನ್.ಮತ್ತಡಿ, ಜಾಲ್ಸೂರು ಗ್ರಾ.ಪಂ.ಉಪಾಧ್ಯಕ್ಷ ದಿನೇಶ್ ಅಡ್ಕಾರ್, ಗೌರಿ ಶಂಕರ ಎಂ, ಶಾಲಾ ಮುಖ್ಯ ಶಿಕ್ಷಕಿ ರೇವತಿ, ಗಾಂಧಿ ಚಿಂತನಾ ವೇದಿಕೆಯ ಸಂಚಾಲಕರಾದ ಹರೀಶ್ ಬಂಟ್ವಾಳ್, ಡಾ.ಸುಂದರ ಕೇನಾಜೆ, ದಿನೇಶ್ ಮಡಪ್ಪಾಡಿ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆ ಉಪಸ್ಥಿತರಿದ್ದರು.

ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನೆಹರೂ ಸ್ಮಾರಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ, ಡಾ.ಪ್ರಭಾಕರ ಶಿಶಿಲ, ಎಂ.ಡಿ.ವಿಜಯಕುಮಾರ್, ಪೂವಪ್ಪ ಕಣಿಯೂರು ಮತ್ತಿತರರು ನಡಿಗೆಯಲ್ಲಿ ಭಾಗವಹಿಸಿದ್ದರು.

ಬೆಳಿಗ್ಗೆ ಒಂಭತ್ತು ಗಂಟೆಗೆ ಬೆಳ್ಳಾರೆಯಿಂದ ಆರಂಭಗೊಂಡ ನಡಿಗೆ ಮೂರೂವರೆ ಗಂಟೆಗೆ ಸುಳ್ಯಕ್ಕೆ ಆಗಮಿಸಿತು. ಜ್ಯೋತಿ ಸರ್ಕಲ್ ನಲ್ಲಿ ಜಾಥಾಕ್ಕೆ ಸ್ವಾಗತ ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror