ಸುಳ್ಯ: ಮಹಾತ್ಮಾ ಗಾಂಧೀಜಿಯವರು ಎಲ್ಲರ ಆತ್ಮದ ಸೊತ್ತು. ಗಾಂಧೀಜಿಯ ಮನಸ್ಸು ಎಲ್ಲೆಡೆ ಕೆಲಸ ಮಾಡ್ತಾ ಇದೆ. ಪ್ರತಿಯೊಬ್ಬರ ಮನಸ್ಸಿನಲ್ಲಿ ಗಾಂಧೀಜಿ ನೆಲೆಯಾಗಬೇಕು. ಆ ಮೂಲಕ ಗಾಂಧೀಜಿಯ ಕಲ್ಪನೆಯ ನಾಡು ಸಾಕಾರಗೊಳ್ಳಬೇಕು ಎಂದು ಕಲಾವಿದ, ನಾಟಕಕಾರ ಮೋಹನ್ ಸೋನ ಹೇಳಿದ್ದಾರೆ.
ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಗಾಂಧಿ ಚಿಂತನ ವೇದಿಕೆಯ ವತಿಯಿಂದ ಬೆಳ್ಳಾರೆಯಿಂದ ಸುಳ್ಯಕ್ಕೆ ನಡೆದ ಗಾಂಧಿ ನಡಿಗೆ ಕಾರ್ಯಕ್ರಮಕ್ಕೆ ಸೋಣಂಗೇರಿಯಲ್ಲಿ ನೀಡಿದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಾ.ಸುಗುಣ ಗೌಡ, ರುಕ್ಮಯ್ಯ ಗೌಡ, ಬಾಲಕೃಷ್ಣ ಆಳ್ವ, ಮೋಂಟಡ್ಕ ರಾಘವ ಗೌಡ, ದೇರ್ಲ ನಾರಾಯಣ ರೈ, ಕೃಷ್ಣ ಸ್ವಾಮಿ ಕುಕ್ಕಂದೂರು, ಪುಟ್ಟ ಅಜಕ್ಕಳಮನೆ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ನ.ಪಂ.ಮುಖ್ಯಾಧಿಕಾರಿ ಎನ್.ಮತ್ತಡಿ, ಜಾಲ್ಸೂರು ಗ್ರಾ.ಪಂ.ಉಪಾಧ್ಯಕ್ಷ ದಿನೇಶ್ ಅಡ್ಕಾರ್, ಗೌರಿ ಶಂಕರ ಎಂ, ಶಾಲಾ ಮುಖ್ಯ ಶಿಕ್ಷಕಿ ರೇವತಿ, ಗಾಂಧಿ ಚಿಂತನಾ ವೇದಿಕೆಯ ಸಂಚಾಲಕರಾದ ಹರೀಶ್ ಬಂಟ್ವಾಳ್, ಡಾ.ಸುಂದರ ಕೇನಾಜೆ, ದಿನೇಶ್ ಮಡಪ್ಪಾಡಿ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆ ಉಪಸ್ಥಿತರಿದ್ದರು.
ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನೆಹರೂ ಸ್ಮಾರಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ, ಡಾ.ಪ್ರಭಾಕರ ಶಿಶಿಲ, ಎಂ.ಡಿ.ವಿಜಯಕುಮಾರ್, ಪೂವಪ್ಪ ಕಣಿಯೂರು ಮತ್ತಿತರರು ನಡಿಗೆಯಲ್ಲಿ ಭಾಗವಹಿಸಿದ್ದರು.
ಬೆಳಿಗ್ಗೆ ಒಂಭತ್ತು ಗಂಟೆಗೆ ಬೆಳ್ಳಾರೆಯಿಂದ ಆರಂಭಗೊಂಡ ನಡಿಗೆ ಮೂರೂವರೆ ಗಂಟೆಗೆ ಸುಳ್ಯಕ್ಕೆ ಆಗಮಿಸಿತು. ಜ್ಯೋತಿ ಸರ್ಕಲ್ ನಲ್ಲಿ ಜಾಥಾಕ್ಕೆ ಸ್ವಾಗತ ನೀಡಲಾಯಿತು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…