ನಮ್ಮೂರ ಸುದ್ದಿ

ಗಾಯಗೊಂಡ ಆನೆಗೆ ಚಿಕಿತ್ಸೆ ನಡೆಯಲಿಲ್ಲ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ  ಬುಧವಾರ ಕಂಡುಬಂದ ಕಾಡಾನೆಗೆ ಗುರುವಾರ ಸಂಜೆಯವರೆಗೆ ಚಿಕಿತ್ಸೆ ನಡೆಯಲಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ.

Advertisement

ಬಾಳುಗೋಡು ಗ್ರಾಮದ ಪದಕ ಮಿತ್ತಡ್ಕ ನಿವಾಸಿಗಳಿಬ್ಬರು ಕಾಡಿನತ್ತ ತೆರಳಿದಾಗ ಗಾಯಗೊಂಡ ಆನೆ ಪತ್ತೆಯಾಗಿತ್ತು. ಬಳಿಕ ಅರಣ್ಯ  ಸುಬ್ರಹ್ಮಣ್ಯ ಅರಣ್ಯ ಇಲಾಖೆ ಸಿಬಂದಿಗಳಿಗೆ ಮಾಹಿತಿಯನ್ನು ಸ್ಥಳೀಯರು  ನೀಡಿದ್ದಾರೆ. ಮಾಹಿತಿ ಪಡೆದ ಅರಣ್ಯ ಸಿಬಂದಿಗಳು ಬುಧವಾರ ಬೆಳಗ್ಗೆ ಆನೆಯಿರುವ ಕಾಡಿನತ್ತ ತೆರಳಿ ಪರಿಶೀಲಿಸಿದರು.ಗುರುವಾರ ಮತ್ತೆ ಆಗಮಿಸಿ ಕಾಡಾನೆಗೆ ನೋವಾಗಿರುವ ಭಾಗವನ್ನು ಬೈನಾಕುಲರ್ ಮೂಲಕ ಗಮನಿಸಿದರು. ಈ ಸಂದರ್ಭ ಗಾಯವಾದ ಹಾಗೂ ಕೀವು ತುಂಬಿರುವುದು ಕಂಡುಬಂದಿದೆ. ಪಶುವೈದ್ಯರು ಸ್ಥಳಕ್ಕೆ ಆಗಮಿಸಿದರೂ ಯಾವುದೇ ಚಿಕಿತ್ಸೆ ನೀಡಲು ಸಾಧ್ಯವಾಗಿರಲಿಲ್ಲ. ಗುರುವಾರ ಆನೆಯು ಘೀಳಿಡುತ್ತಿತ್ತು ಹಾಗೂ ಅತ್ತಿತ್ತ ಚಲನೆಯಲ್ಲಿದ್ದ ಕಾರಣ ಆನೆಯ ಸಮೀಪಕ್ಕೆ ಹೋಗಲು ಸಾಧ್ಯವಾಗಲಿಲ್ಲ.

ಮಧ್ಯಾಹ್ನದ ಬಳಿಕ ಹಿರಿಯ ಅಧಿಕಾರಿಗಳು ಮಾಹಿತಿ ಪಡೆದರು. ಸಂಜೆಯವರೆಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು  ಆನೆಯ ಚಲನವಲ ಗಮನಿಸಿ ತೆರಳಿದರು.

ಶುಕ್ರವಾರ ಮತ್ತೆ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಯಲಿದೆ. ಚುಚ್ಚುಮದ್ದು ನೀಡುವ ವ್ಯವಸ್ಥೆಯ ಬಗ್ಗೆ ಕಾರ್ಯಯೋಜನೆ ನಡೆಯುತ್ತಿದೆ ಎಂದು ಅರಣ್ಯ ಇಲಾಖೆಯ ಸಿಬಂದಿಗಳು ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

13 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

13 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

1 day ago

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

2 days ago