Advertisement
ನಮ್ಮೂರ ಸುದ್ದಿ

ಗಾಯಗೊಂಡ ಆನೆಗೆ ಚಿಕಿತ್ಸೆ ನಡೆಯಲಿಲ್ಲ…!

Share

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ  ಬುಧವಾರ ಕಂಡುಬಂದ ಕಾಡಾನೆಗೆ ಗುರುವಾರ ಸಂಜೆಯವರೆಗೆ ಚಿಕಿತ್ಸೆ ನಡೆಯಲಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ.

Advertisement

ಬಾಳುಗೋಡು ಗ್ರಾಮದ ಪದಕ ಮಿತ್ತಡ್ಕ ನಿವಾಸಿಗಳಿಬ್ಬರು ಕಾಡಿನತ್ತ ತೆರಳಿದಾಗ ಗಾಯಗೊಂಡ ಆನೆ ಪತ್ತೆಯಾಗಿತ್ತು. ಬಳಿಕ ಅರಣ್ಯ  ಸುಬ್ರಹ್ಮಣ್ಯ ಅರಣ್ಯ ಇಲಾಖೆ ಸಿಬಂದಿಗಳಿಗೆ ಮಾಹಿತಿಯನ್ನು ಸ್ಥಳೀಯರು  ನೀಡಿದ್ದಾರೆ. ಮಾಹಿತಿ ಪಡೆದ ಅರಣ್ಯ ಸಿಬಂದಿಗಳು ಬುಧವಾರ ಬೆಳಗ್ಗೆ ಆನೆಯಿರುವ ಕಾಡಿನತ್ತ ತೆರಳಿ ಪರಿಶೀಲಿಸಿದರು.ಗುರುವಾರ ಮತ್ತೆ ಆಗಮಿಸಿ ಕಾಡಾನೆಗೆ ನೋವಾಗಿರುವ ಭಾಗವನ್ನು ಬೈನಾಕುಲರ್ ಮೂಲಕ ಗಮನಿಸಿದರು. ಈ ಸಂದರ್ಭ ಗಾಯವಾದ ಹಾಗೂ ಕೀವು ತುಂಬಿರುವುದು ಕಂಡುಬಂದಿದೆ. ಪಶುವೈದ್ಯರು ಸ್ಥಳಕ್ಕೆ ಆಗಮಿಸಿದರೂ ಯಾವುದೇ ಚಿಕಿತ್ಸೆ ನೀಡಲು ಸಾಧ್ಯವಾಗಿರಲಿಲ್ಲ. ಗುರುವಾರ ಆನೆಯು ಘೀಳಿಡುತ್ತಿತ್ತು ಹಾಗೂ ಅತ್ತಿತ್ತ ಚಲನೆಯಲ್ಲಿದ್ದ ಕಾರಣ ಆನೆಯ ಸಮೀಪಕ್ಕೆ ಹೋಗಲು ಸಾಧ್ಯವಾಗಲಿಲ್ಲ.

ಮಧ್ಯಾಹ್ನದ ಬಳಿಕ ಹಿರಿಯ ಅಧಿಕಾರಿಗಳು ಮಾಹಿತಿ ಪಡೆದರು. ಸಂಜೆಯವರೆಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು  ಆನೆಯ ಚಲನವಲ ಗಮನಿಸಿ ತೆರಳಿದರು.

ಶುಕ್ರವಾರ ಮತ್ತೆ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಯಲಿದೆ. ಚುಚ್ಚುಮದ್ದು ನೀಡುವ ವ್ಯವಸ್ಥೆಯ ಬಗ್ಗೆ ಕಾರ್ಯಯೋಜನೆ ನಡೆಯುತ್ತಿದೆ ಎಂದು ಅರಣ್ಯ ಇಲಾಖೆಯ ಸಿಬಂದಿಗಳು ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

22 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago