ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಬುಧವಾರ ಕಂಡುಬಂದ ಕಾಡಾನೆಗೆ ಗುರುವಾರ ಸಂಜೆಯವರೆಗೆ ಚಿಕಿತ್ಸೆ ನಡೆಯಲಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ.
ಬಾಳುಗೋಡು ಗ್ರಾಮದ ಪದಕ ಮಿತ್ತಡ್ಕ ನಿವಾಸಿಗಳಿಬ್ಬರು ಕಾಡಿನತ್ತ ತೆರಳಿದಾಗ ಗಾಯಗೊಂಡ ಆನೆ ಪತ್ತೆಯಾಗಿತ್ತು. ಬಳಿಕ ಅರಣ್ಯ ಸುಬ್ರಹ್ಮಣ್ಯ ಅರಣ್ಯ ಇಲಾಖೆ ಸಿಬಂದಿಗಳಿಗೆ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ. ಮಾಹಿತಿ ಪಡೆದ ಅರಣ್ಯ ಸಿಬಂದಿಗಳು ಬುಧವಾರ ಬೆಳಗ್ಗೆ ಆನೆಯಿರುವ ಕಾಡಿನತ್ತ ತೆರಳಿ ಪರಿಶೀಲಿಸಿದರು.ಗುರುವಾರ ಮತ್ತೆ ಆಗಮಿಸಿ ಕಾಡಾನೆಗೆ ನೋವಾಗಿರುವ ಭಾಗವನ್ನು ಬೈನಾಕುಲರ್ ಮೂಲಕ ಗಮನಿಸಿದರು. ಈ ಸಂದರ್ಭ ಗಾಯವಾದ ಹಾಗೂ ಕೀವು ತುಂಬಿರುವುದು ಕಂಡುಬಂದಿದೆ. ಪಶುವೈದ್ಯರು ಸ್ಥಳಕ್ಕೆ ಆಗಮಿಸಿದರೂ ಯಾವುದೇ ಚಿಕಿತ್ಸೆ ನೀಡಲು ಸಾಧ್ಯವಾಗಿರಲಿಲ್ಲ. ಗುರುವಾರ ಆನೆಯು ಘೀಳಿಡುತ್ತಿತ್ತು ಹಾಗೂ ಅತ್ತಿತ್ತ ಚಲನೆಯಲ್ಲಿದ್ದ ಕಾರಣ ಆನೆಯ ಸಮೀಪಕ್ಕೆ ಹೋಗಲು ಸಾಧ್ಯವಾಗಲಿಲ್ಲ.
ಮಧ್ಯಾಹ್ನದ ಬಳಿಕ ಹಿರಿಯ ಅಧಿಕಾರಿಗಳು ಮಾಹಿತಿ ಪಡೆದರು. ಸಂಜೆಯವರೆಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ಆನೆಯ ಚಲನವಲ ಗಮನಿಸಿ ತೆರಳಿದರು.
ಶುಕ್ರವಾರ ಮತ್ತೆ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಯಲಿದೆ. ಚುಚ್ಚುಮದ್ದು ನೀಡುವ ವ್ಯವಸ್ಥೆಯ ಬಗ್ಗೆ ಕಾರ್ಯಯೋಜನೆ ನಡೆಯುತ್ತಿದೆ ಎಂದು ಅರಣ್ಯ ಇಲಾಖೆಯ ಸಿಬಂದಿಗಳು ಮಾಹಿತಿ ನೀಡಿದ್ದಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…