ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಬುಧವಾರ ಕಂಡುಬಂದ ಕಾಡಾನೆಗೆ ಗುರುವಾರ ಸಂಜೆಯವರೆಗೆ ಚಿಕಿತ್ಸೆ ನಡೆಯಲಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ.
ಬಾಳುಗೋಡು ಗ್ರಾಮದ ಪದಕ ಮಿತ್ತಡ್ಕ ನಿವಾಸಿಗಳಿಬ್ಬರು ಕಾಡಿನತ್ತ ತೆರಳಿದಾಗ ಗಾಯಗೊಂಡ ಆನೆ ಪತ್ತೆಯಾಗಿತ್ತು. ಬಳಿಕ ಅರಣ್ಯ ಸುಬ್ರಹ್ಮಣ್ಯ ಅರಣ್ಯ ಇಲಾಖೆ ಸಿಬಂದಿಗಳಿಗೆ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ. ಮಾಹಿತಿ ಪಡೆದ ಅರಣ್ಯ ಸಿಬಂದಿಗಳು ಬುಧವಾರ ಬೆಳಗ್ಗೆ ಆನೆಯಿರುವ ಕಾಡಿನತ್ತ ತೆರಳಿ ಪರಿಶೀಲಿಸಿದರು.ಗುರುವಾರ ಮತ್ತೆ ಆಗಮಿಸಿ ಕಾಡಾನೆಗೆ ನೋವಾಗಿರುವ ಭಾಗವನ್ನು ಬೈನಾಕುಲರ್ ಮೂಲಕ ಗಮನಿಸಿದರು. ಈ ಸಂದರ್ಭ ಗಾಯವಾದ ಹಾಗೂ ಕೀವು ತುಂಬಿರುವುದು ಕಂಡುಬಂದಿದೆ. ಪಶುವೈದ್ಯರು ಸ್ಥಳಕ್ಕೆ ಆಗಮಿಸಿದರೂ ಯಾವುದೇ ಚಿಕಿತ್ಸೆ ನೀಡಲು ಸಾಧ್ಯವಾಗಿರಲಿಲ್ಲ. ಗುರುವಾರ ಆನೆಯು ಘೀಳಿಡುತ್ತಿತ್ತು ಹಾಗೂ ಅತ್ತಿತ್ತ ಚಲನೆಯಲ್ಲಿದ್ದ ಕಾರಣ ಆನೆಯ ಸಮೀಪಕ್ಕೆ ಹೋಗಲು ಸಾಧ್ಯವಾಗಲಿಲ್ಲ.
ಮಧ್ಯಾಹ್ನದ ಬಳಿಕ ಹಿರಿಯ ಅಧಿಕಾರಿಗಳು ಮಾಹಿತಿ ಪಡೆದರು. ಸಂಜೆಯವರೆಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ಆನೆಯ ಚಲನವಲ ಗಮನಿಸಿ ತೆರಳಿದರು.
ಶುಕ್ರವಾರ ಮತ್ತೆ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಯಲಿದೆ. ಚುಚ್ಚುಮದ್ದು ನೀಡುವ ವ್ಯವಸ್ಥೆಯ ಬಗ್ಗೆ ಕಾರ್ಯಯೋಜನೆ ನಡೆಯುತ್ತಿದೆ ಎಂದು ಅರಣ್ಯ ಇಲಾಖೆಯ ಸಿಬಂದಿಗಳು ಮಾಹಿತಿ ನೀಡಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…