Advertisement
ನಮ್ಮೂರ ಸುದ್ದಿ

ಗಾಯಗೊಂಡ ಆನೆಗೆ ಚಿಕಿತ್ಸೆ ನಡೆಯಲಿಲ್ಲ…!

Share

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ  ಬುಧವಾರ ಕಂಡುಬಂದ ಕಾಡಾನೆಗೆ ಗುರುವಾರ ಸಂಜೆಯವರೆಗೆ ಚಿಕಿತ್ಸೆ ನಡೆಯಲಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ.

ಬಾಳುಗೋಡು ಗ್ರಾಮದ ಪದಕ ಮಿತ್ತಡ್ಕ ನಿವಾಸಿಗಳಿಬ್ಬರು ಕಾಡಿನತ್ತ ತೆರಳಿದಾಗ ಗಾಯಗೊಂಡ ಆನೆ ಪತ್ತೆಯಾಗಿತ್ತು. ಬಳಿಕ ಅರಣ್ಯ  ಸುಬ್ರಹ್ಮಣ್ಯ ಅರಣ್ಯ ಇಲಾಖೆ ಸಿಬಂದಿಗಳಿಗೆ ಮಾಹಿತಿಯನ್ನು ಸ್ಥಳೀಯರು  ನೀಡಿದ್ದಾರೆ. ಮಾಹಿತಿ ಪಡೆದ ಅರಣ್ಯ ಸಿಬಂದಿಗಳು ಬುಧವಾರ ಬೆಳಗ್ಗೆ ಆನೆಯಿರುವ ಕಾಡಿನತ್ತ ತೆರಳಿ ಪರಿಶೀಲಿಸಿದರು.ಗುರುವಾರ ಮತ್ತೆ ಆಗಮಿಸಿ ಕಾಡಾನೆಗೆ ನೋವಾಗಿರುವ ಭಾಗವನ್ನು ಬೈನಾಕುಲರ್ ಮೂಲಕ ಗಮನಿಸಿದರು. ಈ ಸಂದರ್ಭ ಗಾಯವಾದ ಹಾಗೂ ಕೀವು ತುಂಬಿರುವುದು ಕಂಡುಬಂದಿದೆ. ಪಶುವೈದ್ಯರು ಸ್ಥಳಕ್ಕೆ ಆಗಮಿಸಿದರೂ ಯಾವುದೇ ಚಿಕಿತ್ಸೆ ನೀಡಲು ಸಾಧ್ಯವಾಗಿರಲಿಲ್ಲ. ಗುರುವಾರ ಆನೆಯು ಘೀಳಿಡುತ್ತಿತ್ತು ಹಾಗೂ ಅತ್ತಿತ್ತ ಚಲನೆಯಲ್ಲಿದ್ದ ಕಾರಣ ಆನೆಯ ಸಮೀಪಕ್ಕೆ ಹೋಗಲು ಸಾಧ್ಯವಾಗಲಿಲ್ಲ.

ಮಧ್ಯಾಹ್ನದ ಬಳಿಕ ಹಿರಿಯ ಅಧಿಕಾರಿಗಳು ಮಾಹಿತಿ ಪಡೆದರು. ಸಂಜೆಯವರೆಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು  ಆನೆಯ ಚಲನವಲ ಗಮನಿಸಿ ತೆರಳಿದರು.

ಶುಕ್ರವಾರ ಮತ್ತೆ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಯಲಿದೆ. ಚುಚ್ಚುಮದ್ದು ನೀಡುವ ವ್ಯವಸ್ಥೆಯ ಬಗ್ಗೆ ಕಾರ್ಯಯೋಜನೆ ನಡೆಯುತ್ತಿದೆ ಎಂದು ಅರಣ್ಯ ಇಲಾಖೆಯ ಸಿಬಂದಿಗಳು ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

14 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

23 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

23 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago