ಗಾಯಗೊಂಡ ಕಡವೆಗೆ ಚಿಕಿತ್ಸೆ

June 25, 2019
10:00 PM

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಮೀಪದ ಪದೇಲ ಎಂಬಲ್ಲಿ ಕೃಷಿ ಜಮೀನಿನ ಪಕ್ಕ ಗಾಯಗೊಂಡ ಸ್ಥಿತಿಯಲ್ಲಿ ಕಡವೆಯೊಂದು ಸೋಮವಾರ ಕಂಡು ಬಂದಿದ್ದು ಸ್ಥಳಿಯರ ನೆರವಿನಿಂದ ಅರಣ್ಯ ಇಲಾಖೆ ರಕ್ಷಿಸಿ ಚಿಕಿತ್ಸೆ  ನೀಡಿದೆ.
ಪದೇಲ ಎಂಬಲ್ಲಿ ಕೃಷಿಕ ರಮಾನಂದ ಅವರಿಗೆ ಸೇರಿದ ಕೃಷಿ ತೋಟದ ಪಕ್ಕದಲ್ಲಿ ತೋಟಕ್ಕೆ ಅಳವಡಿಸಿದ ತಂತಿ ಬೇಲಿಯಲ್ಲಿ ಹೆಣ್ಣು ಕಡವೆಯೊಂದು ಸೋಮವಾರ ಸಿಕ್ಕಿ ಹಾಕಿಕೊಡು ಮಲಗಿತ್ತು. ಅದನ್ನು ಗಮನಿಸಿದ ಸ್ಥಳಿಯರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಅರಣ್ಯ ಇಲಾಖೆ ಸಿಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಅದರ ಕಾಲಿಗೆ ಬೇಲಿ ಪರದೆಗಳು ಸಿಕ್ಕಿ ಹಾಕಿಕೊಂಡಿತ್ತು. ಬಳಿಕ ಅವುಗಳನ್ನು ಬಿಡಿಸಿ ತೆರಳಲು ಅವಕಾಶ ಮಾಡಿಕೊಟ್ಟಿದ್ದರು.

ಮಂಗಳವಾರ ಬೆಳಗ್ಗೆ ಕಡವೆ ಅಲ್ಲಿಯೇ ಮಲಗಿಕೊಂಡು ಇದ್ದು ತೆರಳದಿರುವುದನ್ನು ಗಮನಿಸಿದ ಸ್ಥಳಿಯರು ಮತ್ತೆ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ. ಬಳಿಕ ಸ್ಥಳಿಯರ ನೆರವಿನಿಂದ ಅರಣ್ಯ ಇಲಾಖೆ ಸಿಬಂದಿಗಳು ಕಡವೆಯನ್ನು ಅರಣ್ಯ ಇಲಾಖೆ ದೇವರಹಳ್ಳಿ ಸಸ್ಯಪಾಲನ ಕ್ಷೇತ್ರಕ್ಕೆ ಕೊಂಡು ಹೋಗಿ ಅಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡಿದರು. ಗುತ್ತಿಗಾರು ಪಶುವೈದ್ಯ ಕೇಂದ್ರದ ಪಶುವೈದ್ಯಾಧಿಕಾರಿ ಡಾ. ವೆಂಕಟಾಚಲಪತಿ ಅವರು ಆಗಮಿಸಿ ಕಡವೆಗೆ ಚಿಕಿತ್ಸೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror