ಸುದ್ದಿಗಳು

ಗಾಯಗೊಂಡ ಕಡವೆಗೆ ಚಿಕಿತ್ಸೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಮೀಪದ ಪದೇಲ ಎಂಬಲ್ಲಿ ಕೃಷಿ ಜಮೀನಿನ ಪಕ್ಕ ಗಾಯಗೊಂಡ ಸ್ಥಿತಿಯಲ್ಲಿ ಕಡವೆಯೊಂದು ಸೋಮವಾರ ಕಂಡು ಬಂದಿದ್ದು ಸ್ಥಳಿಯರ ನೆರವಿನಿಂದ ಅರಣ್ಯ ಇಲಾಖೆ ರಕ್ಷಿಸಿ ಚಿಕಿತ್ಸೆ  ನೀಡಿದೆ.
ಪದೇಲ ಎಂಬಲ್ಲಿ ಕೃಷಿಕ ರಮಾನಂದ ಅವರಿಗೆ ಸೇರಿದ ಕೃಷಿ ತೋಟದ ಪಕ್ಕದಲ್ಲಿ ತೋಟಕ್ಕೆ ಅಳವಡಿಸಿದ ತಂತಿ ಬೇಲಿಯಲ್ಲಿ ಹೆಣ್ಣು ಕಡವೆಯೊಂದು ಸೋಮವಾರ ಸಿಕ್ಕಿ ಹಾಕಿಕೊಡು ಮಲಗಿತ್ತು. ಅದನ್ನು ಗಮನಿಸಿದ ಸ್ಥಳಿಯರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಅರಣ್ಯ ಇಲಾಖೆ ಸಿಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಅದರ ಕಾಲಿಗೆ ಬೇಲಿ ಪರದೆಗಳು ಸಿಕ್ಕಿ ಹಾಕಿಕೊಂಡಿತ್ತು. ಬಳಿಕ ಅವುಗಳನ್ನು ಬಿಡಿಸಿ ತೆರಳಲು ಅವಕಾಶ ಮಾಡಿಕೊಟ್ಟಿದ್ದರು.

Advertisement
Advertisement

ಮಂಗಳವಾರ ಬೆಳಗ್ಗೆ ಕಡವೆ ಅಲ್ಲಿಯೇ ಮಲಗಿಕೊಂಡು ಇದ್ದು ತೆರಳದಿರುವುದನ್ನು ಗಮನಿಸಿದ ಸ್ಥಳಿಯರು ಮತ್ತೆ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ. ಬಳಿಕ ಸ್ಥಳಿಯರ ನೆರವಿನಿಂದ ಅರಣ್ಯ ಇಲಾಖೆ ಸಿಬಂದಿಗಳು ಕಡವೆಯನ್ನು ಅರಣ್ಯ ಇಲಾಖೆ ದೇವರಹಳ್ಳಿ ಸಸ್ಯಪಾಲನ ಕ್ಷೇತ್ರಕ್ಕೆ ಕೊಂಡು ಹೋಗಿ ಅಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡಿದರು. ಗುತ್ತಿಗಾರು ಪಶುವೈದ್ಯ ಕೇಂದ್ರದ ಪಶುವೈದ್ಯಾಧಿಕಾರಿ ಡಾ. ವೆಂಕಟಾಚಲಪತಿ ಅವರು ಆಗಮಿಸಿ ಕಡವೆಗೆ ಚಿಕಿತ್ಸೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

9 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

10 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

11 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

11 hours ago

ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ

2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…

11 hours ago